'ಆಕ್ಸಿಜನ್‌ ಪೂರೈಕೆಗೆ ಕರ್ನಾಟಕ ಅಡ್ಡಿ!'

Published : May 09, 2021, 10:06 AM IST
'ಆಕ್ಸಿಜನ್‌ ಪೂರೈಕೆಗೆ ಕರ್ನಾಟಕ ಅಡ್ಡಿ!'

ಸಾರಾಂಶ

ಆಕ್ಸಿಜನ್‌ ಪೂರೈಕೆಗೆ ಕರ್ನಾಟಕ| ಅಡ್ಡಿ ಮಹಾರಾಷ್ಟ್ರ ಸಚಿವ ಪಾಟೀಲ್‌ ದೂರು ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹ| ಕೊಲ್ಹಾಪುರ, ಸಾಂಗ್ಲಿ, ಸತಾರ, ಸಿಂಧುದುರ್ಗ, ರತ್ನಗಿರಿ ಸೇರಿ ಹಲವು ಜಿಲ್ಲೆಗಳಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಕೊರತೆ

ಮುಂಬೈ(ಮೇ.09): ಮಹಾರಾಷ್ಟ್ರದ ಪಶ್ಚಿಮದ ಜಿಲ್ಲೆಗಳಲ್ಲಿ ಆಮ್ಲಜನಕ ಪೂರೈಕೆಗೆ ಕರ್ನಾಟಕ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದು ಮಹಾರಾಷ್ಟ್ರದ ಗೃಹ ಖಾತೆ ರಾಜ್ಯ ಸಚಿವ ಸತೇಜ್‌ ಪಾಟೀಲ್‌ ಆರೋಪಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಪಾಟೀಲ್‌, ಕರ್ನಾಟಕದ ಬಳ್ಳಾರಿ ಉಕ್ಕು ಕಾರ್ಖಾನೆಯಿಂದ ಪಶ್ಚಿಮ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ 50 ಮೆಟ್ರಿಲ್‌ ಟನ್‌ನಷ್ಟುಆಮ್ಲಜನಕ ಪೂರೈಕೆಯಾಗುತ್ತಿತ್ತು. ಆದರೆ ಇದೀಗ ಕರ್ನಾಟಕ ಸರ್ಕಾರ ಸರಬರಾಜಿಗೆ ತಡೆ ಮಾಡುತ್ತಿದೆ.

ಹೀಗಾಗಿ ಕೊಲ್ಹಾಪುರ, ಸಾಂಗ್ಲಿ, ಸತಾರ, ಸಿಂಧುದುರ್ಗ, ರತ್ನಗಿರಿ ಸೇರಿ ಹಲವು ಜಿಲ್ಲೆಗಳಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಕೊರತೆಯಾಗಿದೆ. ಹೀಗಾಗಿ ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಸುಗಮ ಪೂರೈಕೆಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ನೇಪಾಳ ಜೆನ್‌-ಝೀ ದಂಗೆ: ₹8.5 ಸಾವಿರ ಕೋಟಿ ನಷ್ಟ
ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು