
ಮುಂಬೈ[ಫೆ.16]: ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಪಿಆರ್, ಎನ್ಆರ್ಸಿ ಬಗ್ಗೆ ರಾಜ್ಯದಲ್ಲಿನ ಆಡಳಿತಾರೂಢ ಶಿವಸೇನೆ- ಕಾಂಗ್ರೆಸ್- ಎನ್ಸಿಪಿ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ, ಈ ಮೂರೂ ವಿಷಯಗಳ ಬಗ್ಗೆ ಎಂಎನ್ಎಸ್ ನಾಯಕ ರಾಜ್ಠಾಕ್ರೆ ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದಾರೆ. ಈ ಮೂಲಕ ಮಹಾಅಘಾಡಿ ಸರ್ಕಾರದ ಭಾಗವಾದ ಬಳಿಕ ಶಿವಸೇನೆಗೆ ಅಂಟಿಕೊಂಡ ಹಿಂದೂ ವಿರೋಧಿ ಕಳಂಕದ ಲಾಭವನ್ನು ಪಡೆಯುವ ಯತ್ನ ಆರಂಭಿಸಿದ್ದಾರೆ.
ಹಿಂದುತ್ವ 'ರಾಜ್'ಕಾರಣಕ್ಕೆ ಠಾಕ್ರೆ: ಮೊದಲ ಟಾರ್ಗೆಟ್ ಅಕ್ರಮ ವಲಸಿಗರೇ!
ಈ ನಿಟ್ಟಿನಲ್ಲಿ ಭಾನುವಾರ ಮುಂಬೈನಲ್ಲಿ ಬೃಹತ್ ರಾರಯಲಿ ಆಯೋಜಿಸಿದ್ದ ಎಂಎನ್ಎಸ್ ನಾಯಕ ರಾಜ್ ಠಾಕ್ರೆ, ‘ದೇಶದಲ್ಲಿ ಬೀಡುಬಿಟ್ಟಿರುವ ಅಕ್ರಮ ಬಾಂಗ್ಲಾದೇಶಿಗಳು ಹಾಗೂ ಪಾಕಿಸ್ತಾನಿಯರನ್ನು ದೇಶದಿಂದ ಹೊರದಬ್ಬಬೇಕೆಂದು ಗುಡುಗಿದ್ದಾರೆ. ಜೊತೆಗೆ ಮುಂಬೈನಲ್ಲಿರುವ ಅಕ್ರಮ ವಲಸಿಗರನ್ನು ಹೊರದಬ್ಬಲು 48 ಗಂಟೆಗಳ ಕಾಲ ಕೇಂದ್ರ ಸರ್ಕಾರ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ ಇನ್ಮುಂದೆ ಕಲ್ಲಿಗೆ ಕಲ್ಲಿನಿಂದಲೇ ಮತ್ತು ಖಡ್ಗಕ್ಕೆ ಖಡ್ಗದಿಂದಲೇ ಉತ್ತರಿಸಲಾಗುತ್ತದೆ’ ಎಂದು ಸಿಎಎ ಹಾಗೂ ಎನ್ಆರ್ಸಿ ವಿರುದ್ಧದ ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದರು. ಈ ಮೂಲಕ ಕೇಂದ್ರದ ಸಿಎಎ ಹಾಗೂ ಎನ್ಆರ್ಸಿ ಹಾಗೂ ಎನ್ಪಿಆರ್ ಅನ್ನು ಸಮರ್ಥಿಸಿಕೊಂಡಿದ್ದಾರೆ.
ಬೆಳಗಾವಿ ‘ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’: ಉದ್ಧವ್ ವಿವಾದ
ಫೆಬ್ರವರಿ 10ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ