ನ.20ಕ್ಕೆ ಮಹಾರಾಷ್ಟ್ರ, ನ.13, 20ರಂದು ಜಾರ್ಖಂಡ್ ಎಲೆಕ್ಷನ್: ರಾಜೀವ್ ಕುಮಾರ್

Published : Oct 16, 2024, 06:59 AM IST
ನ.20ಕ್ಕೆ ಮಹಾರಾಷ್ಟ್ರ, ನ.13, 20ರಂದು ಜಾರ್ಖಂಡ್ ಎಲೆಕ್ಷನ್: ರಾಜೀವ್ ಕುಮಾರ್

ಸಾರಾಂಶ

ಬಿಜೆಪಿ ಹಾಗೂ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆ ಆಗಿರುವ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆಗೆ ಬರುವ ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. 

ನವದೆಹಲಿ (ಅ.16): ಬಿಜೆಪಿ ಹಾಗೂ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆ ಆಗಿರುವ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆಗೆ ಬರುವ ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಇದರ ಜೊತೆ ಜೊತೆಗೇ, ಕರ್ನಾಟಕದ 3 ಸೇರಿ ವಿವಿಧ ರಾಜ್ಯಗಳ 48ವಿಧಾನಸಭೆ ಉಪಚುನಾವಣೆಗಳು ಹಾಗೂ ಕೇರಳದ ವಯನಾಡು, ಮಹಾರಾಷ್ಟ್ರದ ನಾಂ ದೇಡ್‌ ಲೋಕಸಭಾ ಕ್ಷೇತ್ರಗಳಿಗೂ ಉಪಚುನಾವಣೆ ದಿನಾಂಕ ಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ. ಈ ಪ್ರಕಾರ, 288 ಕ್ಷೇತ್ರಗಳ ಮಹಾರಾಷ್ಟ್ರದಲ್ಲಿ ಏಕ ಹಂತದಲ್ಲಿ ಅಂದರೆ ನ.20ಕ್ಕೆ ಮತದಾನ ನಡೆಯಲಿದೆ. 

81 ಕ್ಷೇತ್ರಗಳ ಜಾರ್ಖಂಡ್ ಚುನಾವಣೆಯು ನ.13 ಮತ್ತು ನ.20ರಂದು 2 ಹಂತಗಳಲ್ಲಿ ನಡೆಯಲಿದೆ. ಇದೇ ವೇಳೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡಲ್ಲಿ ನ.13ರಂದು, ಉತ್ತರಾಖಂಡದ ಕೇದಾರನಾಥ್ ವಿಧಾನಸಭೆ ಹಾಗೂ ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರದಲ್ಲಿ ನ.20ರಂದು ಉಪಚುನಾವಣೆ ನಡೆಯಲಿದೆ. 2 ರಾಜ್ಯಗಳ ವಿಧಾನಸಭೆಚುನಾವಣೆ, 48 ವಿಧಾನಸಭಾ ಉಪಚುನಾವಣೆ ಹಾಗೂ ವಯನಾಡ್, ನಾಂದೇಡ್ ಲೋಕಸಭಾ ಉಪಚುನಾವಣಾ ಫಲಿತಾಂಶಗಳು ಒಟ್ಟಿಗೇ ನ.23ರಂದು ಘೋಷಣೆ ಆಗಲಿವೆ. ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ. 

ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಇಳಿದು ಹೊಸ ಜನಾದೇಶ ಪಡೆಯಲಿ: ಎಂ.ಪಿ.ರೇಣುಕಾಚಾರ್ಯ

ಬಿಜೆಪಿ, ಕಾಂಗ್ರೆಸ್‌ಗೆ ಪ್ರತಿಷ್ಠೆ: ಹಾಲಿ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ (ಶಿಂಧೆಬಣ)- ಎನ್ ಸಿಪಿ (ಅಜಿತ್ ಬಣ) ಮೈತ್ರಿಕೂಟ ಅಧಿಕಾರದಲ್ಲಿದೆ. ಅದನ್ನು ಕೆಳಗಿಳಿಸಲು ಕಾಂಗ್ರೆಸ್‌-ಎನ್‌ಸಿಪಿ (ಶರದ್ ಬಣ)- ಶಿವಸೇನೆ (ಠಾಕ್ರೆ ಬಣ) ಮೈತ್ರಿಕೂಟ ಸಾಹಸ ನಡೆಸುತ್ತಿದೆ. ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ ಕೂಟ ಅಧಿಕಾರದಲ್ಲಿದೆ. ಈ ಕೂಟ ಕೆಳಗಿಳಿಸಲು ಬಿಜೆಪಿ ಯತ್ನಿಸುತ್ತಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿನ.26ಕ್ಕೆ ಕೊನೆಗೊಳ್ಳಲಿದ್ದು, ಜಾರ್ಖಂಡ್‌ನ ಅವಧಿ 2025ರ ಜ.5ಕ್ಕೆ ಮುಕ್ತಾಯವಾಗಲಿದೆ. 2019ರ ಜಾರ್ಖಂಡ್ ವಿಧಾನಸಭಾ ಚುನಾವಣೆಯು ಐದು ಹಂತಗಳಲ್ಲಿ ನಡೆದಿದ್ದರೆ, ಮಹಾರಾಷ್ಟ್ರದಲ್ಲಿ ಕೇವಲ ಒಂದು ಹಂತ ಮತದಾನ ನಡೆದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?