ಶಿವಸೇನೆಯಿಂದ ಮುಸ್ಲಿಂ ಮಹಿಳೆಯರಿಗೆ ಉಚಿತ ಬುರ್ಖಾ ಹಂಚಿಕೆ; ಶಿಂಧೆ ಬಣದ ವಿರುದ್ಧ ಸಂಜಯ್ ರಾವುತ್ ಕೆಂಡ!

Published : Sep 09, 2024, 02:06 PM ISTUpdated : Sep 09, 2024, 02:10 PM IST
ಶಿವಸೇನೆಯಿಂದ ಮುಸ್ಲಿಂ ಮಹಿಳೆಯರಿಗೆ ಉಚಿತ ಬುರ್ಖಾ ಹಂಚಿಕೆ; ಶಿಂಧೆ ಬಣದ ವಿರುದ್ಧ ಸಂಜಯ್ ರಾವುತ್ ಕೆಂಡ!

ಸಾರಾಂಶ

ಏಕನಾಥ್ ಶಿಂಧೆ ಬಣದ ಶಿವಸೇನೆ ನಾಯಕರು ಒಂದೆಡೆ ಮುಸ್ಲಿಂ ಮಹಿಳೆಯರಿಗೆ ಬುರ್ಖಾ ಹಂಚುತ್ತಿದೆ ಇನ್ನೊಂದೆಡೆ  ಶಾಲಾ-ಕಾಲೇಜುಗಳಲ್ಲಿ ಬುರ್ಖಾ ಧರಿಸುವುದನ್ನು ವಿರೋಧಿಸುತ್ತಿದ್ದಾರೆ ಎಂದು ಸಂಸದ ಸಂಜಯ್ ರಾವುತ್ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ (ಸೆ.9) ಏಕನಾಥ್ ಶಿಂಧೆ ಬಣದ ಶಿವಸೇನೆ ನಾಯಕರು ಒಂದೆಡೆ ಮುಸ್ಲಿಂ ಮಹಿಳೆಯರಿಗೆ ಬುರ್ಖಾ ಹಂಚುತ್ತಿದೆ ಇನ್ನೊಂದೆಡೆ  ಶಾಲಾ-ಕಾಲೇಜುಗಳಲ್ಲಿ ಬುರ್ಖಾ ಧರಿಸುವುದನ್ನು ವಿರೋಧಿಸುತ್ತಿದ್ದಾರೆ ಎಂದು ಸಂಸದ ಸಂಜಯ್ ರಾವುತ್ ವಾಗ್ದಾಳಿ ನಡೆಸಿದ್ದಾರೆ.

ಶಿವಸೇನೆ ಮುಸ್ಲಿಂ ಮಹಿಳೆಯರಿಗೆ ಬುರ್ಖಾ  ಹಂಚುತ್ತಿರುವುದು ಇದೇ ಮೊದಲು. ಮುಂಬೈನ ಬೈಕುಲ್ಲಾ ಪ್ರದೇಶದ ಹಲವಡೆ ಬುರ್ಖಾ ಹಂಚುವ ಕುರಿತು ಶಿಂಧೆ ಗುಂಪಿನ ಶಾಸಕಿ ಯಾಮಿನಿ ಜಾಧವ್ ಹೋರ್ಡಿಂಗ್ ಹಾಕಿಸಿದ್ದಾರೆ.  ಬುರ್ಖಾ ಮುಸ್ಲಿಂ ಮಹಿಳೆಯರಿಗಷ್ಟೇ ಅಲ್ಲ ಪಕ್ಷ ತೊರೆದಿರುವ ಶಾಸಕರಿಗೂ ತೊಡಿಸಬೇಕು. ಏಕೆಂದರೆ ಮುಂಬರುವ ಚುನಾವಣೆಯಲ್ಲಿ ಬುರ್ಖಾ ಧರಿಸಿ ಸಾರ್ವಜನಿಕ ಕಣ್ಣುತಪ್ಪಿಸಿ ಓಡಾಡಬೇಕಾಗುತ್ತೆ. ಸಾರ್ವಜನಿಕರ ಕೈಗೆ ಸಿಕ್ಕರೆ ಶೂ ಕಿತ್ತು ಹೊಡೆಯುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶಿವಾಜಿ ಪ್ರತಿಮೆ ಕುಸಿತ ಪ್ರಕರಣ; ಪರಾರಿಯಾಗಿದ್ದ ಶಿಲ್ಪಿ ಜಯದೀಪ್ ಅರೆಸ್ಟ್

ಶಿಂಧೆ ಬಣದ ನಾಯಕರು ಎಂತಹ ಕಪಟಿಗಳೆಂದರೆ. ಚುನಾವಣೆಯಲ್ಲಿ ಗೆಲ್ಲಲು ಯಾವ ಹಂತಕ್ಕೂ ಇಳಿಯಬಲ್ಲರು. ಒಂದು ಕಡೆ ಮುಸ್ಲಿಂ ವೋಟು ಬ್ಯಾಂಕ್‌ಗೆ ಬುರ್ಖಾ ಹಂಚುತ್ತಿದ್ದಾರೆ. ಇನ್ನೊಂದೆಡೆ ಶಾಲಾ ಕಾಲೇಜುಗಳಲ್ಲಿ ಬುರ್ಖಾ ಧರಿಸುವುದನ್ನು ವಿರೋಧಿಸುತ್ತಿದ್ದಾರೆ ಎಂದು ಶಿಂಧೆ ಬಣದ ವಿರೋಧಾಭಾಸ ಎತ್ತಿ ತೋರಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಯಾಮಿನಿ ಜಾಧವ್ ಮುಸ್ಲಿಂ ಪ್ರಾಬಲ್ಯವಿರುವ ಬೈಕುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಮತದಾರರನ್ನು ಓಲೈಕೆ ಮಾಡಲು ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಹಿಂದೆ ಯಾವತ್ತೂ ಶಿವಸೇನೆಯಿಂದ ಮುಸ್ಲಿಂ ಮಹಿಳೆಯರಿಗೆ ಬುರ್ಖಾ ಹಂಚುವ ಕೆಲಸ ಮಾಡಿದ್ದಿಲ್ಲ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!