
ಕಾರವಾರ (ಜೂ.3): ಮಹಾರಾಷ್ಟ್ರದ ಕರಾವಳಿಯಿಂದ ಹೊರಟ ಆಲಿವ್ ರಿಡ್ಲಿ ಪ್ರಭೇದದ ಹೆಣ್ಣು ಆಮೆ ಬರೋಬ್ಬರಿ 3500 ಕಿ.ಮೀ. ಪ್ರಯಾಣ ಬೆಳೆಸಿ ಓಮನ್ ದೇಶದ ಸಮೀಪವಿರುವ ಮಸೀರಾ ದ್ವೀಪದವರೆಗೂ ತಲುಪಿ ಮತ್ತೆ ಕಾರವಾರದ ಕಡಲತೀರ ತಲುಪಿದೆ.
2025ರ ನವೆಂಬರ್ನಲ್ಲಿ ಮಹಾರಾಷ್ಟ್ರದ ದಹಾನು ಕರಾವಳಿಯಲ್ಲಿ ಆಲಿವ್ ರಿಡ್ಲಿ ಪ್ರಭೇದದ ಹೆಣ್ಣು ಆಮೆ ಮೀನುಗಾರರ ಬಲೆಗೆ ಬಿದ್ದಿತ್ತು. ಈ ಆಮೆಯನ್ನು ವಿಜ್ಞಾನಿಗಳು ರಕ್ಷಿಸಿ ಧವಳಲಕ್ಷ್ಮಿ ಎಂದು ನಾಮಕರಣ ಮಾಡಿದ್ದರು. ಆಮೆಯ ಚಲನವಲನ ಅಧ್ಯಯನಕ್ಕಾಗಿ ವೈಲ್ಡ್ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ವಿಜ್ಞಾನಿ ಸುರೇಶ್, ಮಹಾರಾಷ್ಟ್ರ ಮ್ಯಾಂಗ್ರೋವ್ ಫೌಂಡೇಶನ್ ತಂತ್ರಜ್ಞರ ತಂಡ ಆಮೆ ಬೆನ್ನಿಗೆ ಸ್ಯಾಟಲೈಟ್ ಡಿವೈಸ್ ಅಳವಡಿಸಿ ಸಮುದ್ರಕ್ಕೆ ಬಿಟ್ಟಿದ್ದರು.
ಮಹಾರಾಷ್ಟ್ರ ತಂಡ ಆಮೆಯ ಓಡಾಟವನ್ನು ನಿರಂತರವಾಗಿ ಟ್ರ್ಯಾಕ್ ಮಾಡುತ್ತಿತ್ತು. ಆಮೆಯು ಮಹಾರಾಷ್ಟ್ರ ಕರಾವಳಿಯಿಂದ ಪಶ್ಚಿಮಕ್ಕೆ ಆಳ ಸಮುದ್ರವನ್ನು ದಾಟಿ, ಓಮನ್ ಸಮೀಪವಿರುವ ಮಸೀರಾ ದ್ವೀಪದವರೆಗೂ ತಲುಪಿತ್ತು. ಅಲ್ಲಿಂದ ಮರಳಿ ಭಾರತದತ್ತ ಪ್ರಯಾಣ ಬೆಳೆಸಿದ ಈ ಆಮೆ ಕೇರಳ, ಮುರುಡೇಶ್ವರ ಸೇರಿ ವಿವಿಧ ಕಡಲತೀರಗಳಲ್ಲಿ ಓಡಾಟ ನಡೆಸಿ, ಸದ್ಯ ಕಾರವಾರದ ಕಾಂಟಿನೆಂಟಲ್ ಶೆಲ್ಫ್ ಬ್ರೇಕರ್ ಪ್ರದೇಶದಲ್ಲಿ ಬೀಡುಬಿಟ್ಟಿದೆ.
ಕಾರವಾರದ ಸಾಗರ ವಿಜ್ಞಾನಿ ಡಾ। ಶಿವಕುಮಾರ ಹರಗಿ ಮಾತನಾಡಿ, ಆಮೆಗಳು ಎಲ್ಲಿಗೇ ಹೋದರೂ, ಕೊನೆಗೆ ತಾವು ಮೊಟ್ಟೆಯೊಡೆದು ಬಂದ ಮೂಲ ಸ್ಥಾನಕ್ಕೇ ಮರಳುತ್ತವೆ ಎಂದು ವಿವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ