
ಮುಂಬೈ(ಡಿ.04): ಮಹಾರಾಷ್ಟ್ರದ ಸಿಎಂ ಆಗುತ್ತಿದ್ದಂತೇ ತಮ್ಮ ತತ್ವಾದರ್ಶಗಳಿಗೆ ತೀಲಾಂಜಲಿ ಇಟ್ಟಿರುವ ಶಿವಸೇನೆಯ ಉದ್ಧವ್ ಠಾಕ್ರೆ, ತಮ್ಮ ಪಕ್ಷದ ಮೂಲ ಸಿದ್ಧಾಂತದಿಂದ ದೂರ ಸರಿಯುತ್ತಿರುವ ಹಾಗೆ ಭಾಸವಾಗುತ್ತಿದೆ.
ನಾನು ಹಿಂದುತ್ವ ಬಿಟ್ಟಿಲ್ಲ, ಬಿಡೋದೂ ಇಲ್ಲ: ಠಾಕ್ರೆ
ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳನ್ನು ವಾಪಾಸ್ ಪಡೆಯುವುದಾಗಿ ಸಿಎಂ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ.
ಬುಲೆಟ್ ರೈಲು: ಯೋಜನೆ ಮರುಪರಿಶೀಲನೆಗೆ ಮುಂದಾದ ಉದ್ಧವ್!
ಮಾವೋವಾದಿಗಳ ಜೊತೆಗಿನ ನಂಟು ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹೋರಾಟಗಾರರ ಮೇಲಿನ ಪ್ರಕರಣಗಳು ಮುಂದುವರೆಯಲಿವೆ ಎಂದೂ ಉದ್ಧವ್ ಸ್ಪಷ್ಟಪಡಿಸಿದ್ದಾರೆ.
ಗಂಭೀರ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರನ್ನು ಹೊರತುಪಡಿಸಿ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ವಾಪಾಸ್ ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಉದ್ಧವ್ ತಿಳಿಸಿದ್ದಾರೆ.
ಜಾತ್ಯಾತೀತತೆ ಎಂದರೇನು?: ಉದ್ಧವ್ ಠಾಕ್ರೆ ಹೇಳಿದ್ದು ಕೇಳಿದಿರೇನು?
ಎನ್ಸಿಪಿ ನಾಯಕರ ಒತ್ತಡಕ್ಕೆ ಮಣಿದು ಉದ್ಧವ್ ಸರ್ಕಾರ ಭೀಮಾ ಕೋರೆಗಾಂವ್ ಪ್ರಕರಣಗಳನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿದೆ ಎನ್ನಲಾಗಿದ್ದು, ಹೋರಾಟಗಾರರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಕೈಬಿಡುವಂತೆ ಎನ್ಸಿಪಿ ಒತ್ತಡ ಹೇರಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕಳೆದ ವರ್ಷ ಜನವರಿ 1 ರಂದು ಭೀಮಾ ಕೋರೆಗಾಂವ್ನಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣದಲ್ಲಿ, ಅನೇಕ ದಲಿತ ಹೋರಾಟಗಾರ ಮೇಲೆ ಮೊಕದ್ದಮೆ ದಾಖಲಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ