ದೇಶ ಮೊದಲು ಎಂದ ಸಚಿನ್, ಮಂಗೇಶ್ಕರ್, ಸೆಲೆಬ್ರೆಟಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರ ತನಿಖೆ!

Published : Feb 08, 2021, 03:22 PM ISTUpdated : Feb 08, 2021, 03:32 PM IST
ದೇಶ ಮೊದಲು ಎಂದ ಸಚಿನ್, ಮಂಗೇಶ್ಕರ್, ಸೆಲೆಬ್ರೆಟಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರ ತನಿಖೆ!

ಸಾರಾಂಶ

ರೈತ ಪ್ರತಿಭಟನೆ ಬಳಸಿಕೊಂಡು ದೇಶದ ವಿರುದ್ಧ ಪಿತೂರಿ ನಡೆಸಲು ಬಂದ ವಿದೇಶಿ ಸೆಲೆಬ್ರೆಟಿಗಳಿಗೆ ಸಚಿನ್ ಸೇರಿದಂತೆ ಭಾರತೀಯ ಸೆಲೆಬ್ರೆಟಿಗಳು ತಿರುಗೇಟು ನೀಡಿದ್ದರು. ಬಳಿಕ ಕಾಂಗ್ರೆಸ್ ಸಚಿನ್ ವಿರುದ್ಧ ಪ್ರತಿಭಟನೆ ನಡೆಸಿ ಕೂಡ ಆಗಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ  ಮಹಾರಾಷ್ಟ್ರ ಸರ್ಕಾರ, ಸಚಿನ್, ಲತಾ ಮಂಗೇಶ್ಕರ್ ಸೇರಿದಂತೆ ಸೆಲೆಬ್ರೆಟಿಗಳ ವಿರುದ್ಧ ತನಿಖೆಗೆ ಆದೇಶಿಸಿದೆ. 

ಮುಂಬೈ(ಫೆ.08): ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ಗಾಯಕಿ ಲತಾ ಮಂಗೇಶ್ಕರ್, ನಟ ಸುನಿಲ್ ಶೆಟ್ಟಿ, ಅಕ್ಷಯ್ ಕುಮಾರ್ ಸೇರಿದಂತೆ ಭಾರತದ ಸೆಲೆಬ್ರೆಟಿಗಳು, ದೇಶ ಮೊದಲು, ನಮ್ಮ ಆತಂರಿಕ ವಿಚಾರದಲ್ಲಿ ಮೂಗುತೂರಿಸಬೇಡಿ ಎಂದು ಖಡಕ್ ವಾರ್ನಿಂಗ್ ಮಾಡಿದ್ದರು. ಆದರೆ ಈ ಟ್ವೀಟ್‌ನಲ್ಲಿ ರೈತರ ವಿರೋಧವಾಗಲಿ, ಕೇಂದ್ರ ಸರ್ಕಾರದ ಪರವಾಗಲಿ ಮಾತಾಡಿಲ್ಲ. ಆದರೆ ಕಾಂಗ್ರೆಸ್ ಹಾಗೂ ಶಿವಸೇನೆಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಸಚಿನ್ ಭಾರತ ರತ್ನಕ್ಕೆ ಅರ್ಹರಲ್ಲ, ಪವಾರ್ ಬಳಿಕ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ

ಸಚಿನ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಸಚಿನ್ ಕಟೌಟ್‌ಗೆ ಯೂಥ್ ಕಾಂಗ್ರೆಸ್ ಮಸಿ ಬಳಿದರೆ, ಇತ್ತ ಎನ್‌ಸಿಪಿ ನಾಯಕ ಶರದ್ ಪವಾರ್, ಇತರ ಕ್ಷೇತ್ರದ ಬಗ್ಗೆ ಮಾತನಾಡುವಾಗ ಸಚಿನ್ ಎಚ್ಚರಿಕೆ ವಹಿಸಲಿ ಎಂದು ವಾರ್ನಿಂಗ್ ನೀಡಿದರು. ಪಂಜಾಬ್ ಕಾಂಗ್ರೆಸ್ ಸಂಸದ, ಸಚಿನ್ ಭಾರತ ರತ್ನಕ್ಕೆ ಅರ್ಹರಲ್ಲ ಎಂದಿದ್ದರು. ಇದಕ್ಕೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು.  

ಸಚಿನ್ ತೆಂಡುಲ್ಕರ್‌ಗೆ ಎಚ್ಚರಿಕೆ ನೀಡಿದ ಶರದ್ ಪವಾರ್‌ಗೆ ಭಾರತೀಯರಿಂದ ಮಂಗಳಾರತಿ!

ಈ ಎಲ್ಲಾ ಘಟನೆಗಳು ಕಾಂಗ್ರೆಸ್, ಶಿವಸೇನೆಯ ಮಹಾರಾಷ್ಟ್ರದ ಮೈತ್ರಿ ಸರ್ಕಾರ ಇದೀಗ ಭಾರತ ರತ್ನ ಸಚಿನ್ ತೆಂಡುಲ್ಕರ್, ಲತಾ ಮಂಗೇಶ್ಕರ್ ಸೇರಿದಂತೆ ಸೆಲೆಬ್ರೆಟಿಗಳ ವಿರುದ್ಧ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ. ಸೆಲೆಬ್ರೆಟಿಗಳು ಟ್ವೀಟ್ ಹಿಂದೆ ಬಿಜೆಪಿ ಕೈವಾಡವಿದೆ. ಸೆಲೆಬ್ರೆಟಿಗಳ ಮೇಲೆ ಬಿಜೆಪಿ ಒತ್ತಡ ಹೇರಿ ಈ ರೀತಿ ಮಾಡುತ್ತಿದೆ. ಹೀಗಾಗಿ ತನಿಖೆಯ ಅಗತ್ಯವಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

ದೇಶ ಮೊದಲು ಎಂದ ಸಚಿನ್ ತೆಂಡುಲ್ಕರ್‌ಗೆ ಭಾರಿ ಬೆಂಬಲ!...

ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್ ಸೇರಿದಂತೆ ಸೆಲೆಬ್ರೆಟಿಗಳು ದೇಶ ವಿರುದ್ಧ ನಡೆದ ಪಿತೂರಿ ವಿರೋಧಿಸಿ ಮಾಡಿದ ಟ್ವೀಟ್ ವಿವರ ಇಲ್ಲಿದೆ. 



 

ಮಹಾರಾಷ್ಚ್ರ ಸರ್ಕಾರದ ತನಿಖೆ ಆದೇಶದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಜನಸಾಮಾನ್ಯರು ಸೇರಿದಂತೆ ಗಣ್ಯರು ಇದೀಗ ಮಹಾರಾಷ್ಟ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ