
ಪುಣೆ(ಮೇ.28): ಭಾರತದ ಕಳೆದೆರಡು ವಾರದಿಂದ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಮಹಾರಾಷ್ಟ್ರದಲ್ಲಿ ಮೊದಲ ಓಮಿಕ್ರಾನ್ ಉಪತಳಿ BA.4 ಹಾಗೂ BA.5 ಪತ್ತೆಯಾಗಿದೆ. ಪುಣೆಯಲ್ಲಿ ಪತ್ತೆಯಾದ 7 ಪ್ರಕರಣಗಳಲ್ಲಿ ಮೂರು ಪ್ರಕರಣ BA.4 ಹಾಗೂ ಇನ್ನುಳಿದ 4 ಪ್ರಕರಣ BA.5 ಉಪತಳಿಯಾಗಿದೆ.
ಮಹಾರಾಷ್ಟ್ರ ರಾಜ್ಯ ಆರೋಗ್ಯ ಇಲಾಖೆ ಓಮಿಕ್ರಾನ್ ಉಪತಳಿ ಪತ್ತೆಯನ್ನು ಖಚಿತಪಡಿಸಿದೆ. ಒಂದೇ ಬಾರಿಗೆ ಒಟ್ಟು 7 ಪ್ರಕರಣಗಳು ಪತ್ತೆಯಾಗಿರುವುದು ಮಹಾರಾಷ್ಟ್ರದ ಆತಂಕ ಹೆಚ್ಚಿಸಿದೆ. ಪುಣೆಯಲ್ಲಿ ನಡೆಸಿದ ಜೆನೋಮ್ ಸೀಕ್ವೆನ್ಸ್ ಪರೀಕ್ಷೆಯಲ್ಲಿ ಓಮಿಕ್ರಾನ್ ಉಪತಳಿ ಪತ್ತೆಯಾಗಿದೆ. ಇದೀಗ ಮುಂಬೈನಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜಿನೋಮ್ ಸೀಕ್ವೆನ್ಸ್ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ.
Covid Crisis: ಬೆಂಗ್ಳೂರಲ್ಲಿ ಕೊರೋನಾ ಸಂಖ್ಯೆಯಲ್ಲಿ ಭಾರೀ ಏರಿಕೆ: ಹೆಚ್ಚಿದ ಆತಂಕ
ದೇಶದಲ್ಲಿ ಮೊದಲ BA.4 ಉಪತಳಿ ಹೈದರಾಬಾದ್ನಲ್ಲಿ ಪತ್ತೆಯಾಗಿತ್ತು. ಬಳಿಕ ತೆಲಂಗಾಣ, ತಮಿಳುನಾಡಿನಲ್ಲೂ ಉಪತಳಿ ಪತ್ತೆಯಾಗಿತ್ತು. ಇದೀಗ ಮತ್ತೆ ಓಮಿಕ್ರಾನ್ ಉಪತಳಿ ಹಾವಳಿ ಹೆಚ್ಚಾಗುತ್ತಿದೆ. BA.4 ಹಾಗೂ BA.5 ಅತ್ಯಂತ ವೇಗವಾಗಿ ಹರಡಬಲ್ಲ ಉಪತಳಿಯಾಗಿದೆ.
2685 ಹೊಸ ಕೇಸು, 33 ಸಾವು: ಸಕ್ರಿಯ ಕೇಸು 16308ಕ್ಕೆ ಏರಿಕೆ
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಒಟ್ಟು 2,685 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆಯಲ್ಲಿ 33 ಸೋಂಕಿತರು ಸಾವಿಗೀಡಾಗಿದ್ದಾರೆ. ಆದರೆ ಕೇವಲ 2100 ಸೋಂಕಿತರು ಗುಣವಾದ ಕಾರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯು 16,308ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರವು ಶೇ. 0.60ರಷ್ಟಿದ್ದು, ವಾರದ ಪಾಸಿಟಿವಿಟಿ ದರವು ಶೇ. 0.54ರಷ್ಟಿದೆ. ಕೋವಿಡ್ ಚೇತರಿಕೆ ದರವು ಶೇ. 98.75ರಷ್ಟಿದೆ. ದೇಶದಲ್ಲಿ ಈವರೆಗೆ ಒಟ್ಟು 193.13 ಕೋಟಿ ಡೋಸು ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ.
ಕೋವಿಡ್ ಲಸಿಕೆ ಸರ್ಟಿಫಿಕೇಟ್ನಿಂದ ಬಯಲಾಯ್ತು 2ನೇ ಹೆಂಡತಿ ರಹಸ್ಯ!
142 ಮಂದಿಗೆ ಸೋಕು, 166 ಮಂದಿ ಚೇತರಿಕೆ
ಬೆಂಗಳೂರು ನಗರದಲ್ಲಿ ಗುರುವಾರ 142 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.14ಕ್ಕೆ ಹೆಚ್ಚಾಗಿದೆ. 166 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್ ಸಾವು ದಾಖಲಾಗಿಲ್ಲ. ಸದ್ಯ ನಗರದಲ್ಲಿ ಒಟ್ಟು 1,706 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ ಇಬ್ಬರು ಸಾಮಾನ್ಯ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆ ಆರೈಕೆಯಲ್ಲಿದ್ದಾರೆ.
13,197 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 2338 ಮಂದಿ ಮೊದಲ ಡೋಸ್, 7011 ಮಂದಿ ಎರಡನೇ ಡೋಸ್ ಮತ್ತು 3,848 ಮಂದಿ ಮೂರನೇ ಡೋಸ್ ಲಸಿಕೆ ಪಡೆದಿದ್ದಾರೆ. ಒಟ್ಟು 13,751 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 10,913 ಆರ್ಟಿಪಿಸಿಆರ್ ಹಾಗೂ 2,838 ರಾರಯಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ