ಕೇರಳ ಬಜೆಟ್ ಮುಖಪುಟದಲ್ಲಿ ಗಾಂಧಿ ಹತ್ಯೆಯ ಚಿತ್ರ: ಭುಗಿಲೆದ್ದ ವಿವಾದ!

Suvarna News   | Asianet News
Published : Feb 07, 2020, 09:42 PM IST
ಕೇರಳ ಬಜೆಟ್ ಮುಖಪುಟದಲ್ಲಿ ಗಾಂಧಿ ಹತ್ಯೆಯ ಚಿತ್ರ: ಭುಗಿಲೆದ್ದ ವಿವಾದ!

ಸಾರಾಂಶ

ಕೇರಳ ಬಜೆಟ್ ಪ್ರತಿಯಲ್ಲಿ ಗಾಂಧಿ ಹತ್ಯೆಯ ಚಿತ್ರಣ| ಹೊಸ ವಿವಾದ ಮೈಮೇಲೆ ಎಳೆದುಕೊಂಡ ಎಡರಂಗ ಸರ್ಕಾರ| ರಾಜಕೀಯ ಉದ್ದೇಶದಿಂದಲೇ ಮುದ್ರಣ ಎಂದ ಕೇರಳ ಸಚಿವ| 'ಗಾಂಧಿ ಹತ್ಯೆ ಮಾಡಿದವರು ಯಾರು ಎಂಬುದನ್ನು ತಿಳಿಸುವ ನಿರ್ಣಯ'| 'ಸಿಎಎ ಹಾಗೂ ಎನ್‌ಆರ್‌ಸಿ ನೆಪದಲ್ಲಿ ಬಿಜೆಪಿ ದೇಶವನ್ನು ವಿಭಜಿಸುತ್ತಿದೆ'|

ತಿರುವನಂತಪುರಂ(ಫೆ.07): ಕೇರಳ ಸರ್ಕಾರ ತನ್ನ 2020-21ನೇ ಸಾಲಿನ ಬಜೆಟ್'ನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಬಜೆಟ್ ಪ್ರತಿಯ ಮುಖಪುಟದಲ್ಲಿ ಗಾಂಧಿ ಹತ್ಯೆಯ ಚಿತ್ರ ಮುದ್ರಿಸಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. 

ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಡುವ ಭರದಲ್ಲಿ ಬಜೆಟ್ ಪ್ರತಿ ಮೇಲೆ ಗಾಂಧಿ ಹತ್ಯೆಯ ಚಿತ್ರ ಮುದ್ರಸಿ ಎಡರಂಗ ಸರ್ಕಾರ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.

ಅಲ್ಲದೇ ಬಜೆಟ್ ಪ್ರತಿ ಮೇಲೆ ಗಾಂಧಿ ಹತ್ಯೆಯ ಚಿತ್ರ ಮುದ್ರಿಸಿರುವುದು ರಾಜಕೀಯ ಉದ್ದೇಶದಿಂದ ಎಂದು ಸಚಿವ ಥಾಮಸ್ ಐಸಾಕ್‌ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಮಹಾತ್ಮಾ ಗಾಂಧಿಯ ಹತ್ಯೆಯ ಸನ್ನಿವೇಶವನ್ನು ಬಜೆಟ್ ಪ್ರತಿಯಲ್ಲಿ ಮುದ್ರಿಸಿ ಗಾಂಧಿ ಹತ್ಯೆ ಮಾಡಿದವರು ಯಾರು ಎಂಬುದನ್ನು ಮತ್ತೆ ನೆನಪಿಸುವ ಉದ್ದೇಶ ಎಂದು ಥಾಮಸ್ ಹೇಳಿದ್ದಾರೆ.

ಗಾಂಧಿ ನಿಮಗೆ ಟ್ರೇಲರ್ ಇದ್ದಂತೆ, ನಮಗೆ ಜೀವನ: ವಿಪಕ್ಷಗಳ ಕಾಲೆಳೆದ ಮೋದಿ!

ಸಿಎಎ ಹಾಗೂ ಎನ್‌ಆರ್‌ಸಿ ನೆಪದಲ್ಲಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಮಾಜವನ್ನು ವಿಭಜಿಸುತ್ತಿದ್ದು, ಈ ಕೋಮು ವಿಭಜನಕಾರಿ ರಾಜಕೀಯ ಉದ್ದೇಶವನ್ನು ಸೋಲಿಸುವುದು ತಮ್ಮ ಗುರಿ ಎಂದು ಥಾಮಸ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ