
ಕರೂರ್[ಫೆಲ.10]: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮಹಿಳೆಯರಿಗೆ ಮೀಸಲಿದ್ದ ಗ್ರಾಮ ಪಂಚಾಯತ್ ಕ್ಷೇತ್ರದಲ್ಲಿ ಪುರುಷ ಅಭ್ಯರ್ಥಿ ಗೆದ್ದ ಅಚ್ಚರಿಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
2019ರ ಡಿ.30ರಂದು ಕೃಷ್ಣನಾರಾಯಣಪುರಂ ಗ್ರಾಮ ಪಂಚಾಯತ್ಗೆ ಚುನಾವಣೆ ನಡೆದಿತ್ತು. ಅಲ್ಲಿಂದ ಎ.ಕೃಷ್ಣಮೂರ್ತಿ ಎಂಬುವವರು ವಿಜಯಶಾಲಿಯಾಗಿದ್ದರು. ಬಳಿಕ ಜ.11ರಂದು ನಡೆದ ಚುನಾವಣೆಯಲ್ಲಿ ಕೃಷ್ಣಮೂರ್ತಿ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು. ಆದರೆ ಈ ಫಲಿತಾಂಶವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡುವ ವೇಳೆ ಕೃಷ್ಣನಾರಾಯಣಪುರಂ ಕ್ಷೇತ್ರ ಮಹಿಳೆಯರಿಗೆ ಮೀಸಲಿಟ್ಟಿದ್ದು ಎಂಬುದು ಅಧಿಕಾರಿಗಳ ಅರಿವಿಗೆ ಬಂದಿದೆ.
ಎಡವಟ್ಟು ಬೆಳಕಿಗೆ ಬಂದ ಮೇಲೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ