
ಬೆಂಗಳೂರು (ಫೆ.23): ಭಾರತೀಯ ರೈಲ್ವೆ ಇಲಾಖೆಯ ಅಮೃತ್ ಭಾರತ್ ಸ್ಟೇಷನ್ ಯೋಜನೆ (Amrit Bharat Station Scheme) ಅಡಿಯಲ್ಲಿ ಕರ್ನಾಟಕದ 12 ರೈಲ್ವೆ ನಿಲ್ದಾಣಗಳು ಸೇರಿ ನೈರುತ್ಯ ರೈಲ್ವೇ ವಿಭಾಗದ 15 ರೈಲು ನಿಲ್ದಾಣಗಳನ್ನು ಸ್ಮಾರ್ಟ್ ನಿಲ್ದಾಣಗಳಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಇದಕ್ಕಾಗಿ ನೈರುತ್ಯ ರೈಲ್ವೆ ವಿಭಾಗದಿಂದ 372.13 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.
ಹೌದು, ನೈರುತ್ಯ ರೈಲ್ವೆ ವಿಭಾಗದಿಂದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 372.13 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದ 12 ರೈಲ್ವೆ ನಿಲ್ದಾಣಗಳು ಸೇರಿದಂತೆ ಒಟ್ಟು 15 ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಬೆಂಗಳೂರು ವಿಭಾಗದ 15 ನಿಲ್ದಾಣಗಳನ್ನ ನೈರುತ್ಯ ರೈಲ್ವೆ ವಿಭಾಗದಿಂದ ಆಯ್ಕೆ ಮಾಡಿಕೊಳ್ಳಲಾಗಿದೆ. ಫೆ.26ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲ್ವೇ ನಿಲ್ದಾಣ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
ಕೊಡಗು ಜುಮ್ಮಾ ಮಸೀದಿಯಲ್ಲಿ ನಮಾಜ್ ಮಾಡಿದ ಮಹಿಳೆಗೆ 25 ವರ್ಷ ಬಹಿಷ್ಕಾರ; ಗಂಡನ ಅಂತ್ಯಕ್ರಿಯೆಗೂ ಅವಕಾಶವಿಲ್ಲ
ಅಭಿವೃದ್ಧಿ ಮಾಡುವ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಎಸ್ಕಲೇಟರ್, ಸ್ಮಾರ್ಟ್ ಪಾರ್ಕಿಂಗ್, ಶೌಚಾಲಯ ಸೇರಿ ವಿವಿಧ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಜೊತೆಗೆ, ರೈಲ್ವೆ ಇಲಾಖೆಗೆ ಅಗತ್ಯವಿರುವ ಇನ್ನಿತರ ಸ್ಮಾರ್ಟ್ ಟನ್ ಅನ್ನು ನೀಡಲಾಗುತ್ತದೆ. ಈ ಮೂಲಕ ನೈರುತ್ಯ ರೈಲ್ವೆ ವಿಭಾಗದಲ್ಲಿನ ರೈಲು ನಿಲ್ದಾಣಗಳಿಗೆ ಹೊಸ ರೂಪವನ್ನು ನೀಡಲಾಗುತ್ತದೆ ಎಂದು ನೈರುತ್ಯ ರೈಲ್ವೆ ಡಿಆರ್ ಎಂ ಯೋಗೇಶ್ ಮೋಹನ್ ಅವರು ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದರು.
ಯಾವ್ಯಾವ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಆಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ