ಯುದ್ಧಪೀಡಿತ ಇಸ್ರೇಲ್‌ನಲ್ಲಿ 15000 ಭಾರತೀಯರಿಗೆ ಮೋದಿಯಿಂದ ಕೆಲಸ: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

Published : Oct 05, 2024, 09:04 AM ISTUpdated : Oct 05, 2024, 09:11 AM IST
ಯುದ್ಧಪೀಡಿತ ಇಸ್ರೇಲ್‌ನಲ್ಲಿ 15000 ಭಾರತೀಯರಿಗೆ ಮೋದಿಯಿಂದ ಕೆಲಸ: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ಸಾರಾಂಶ

‘ಮೋದಿ ಸರ್ಕಾರದ ಕೌಶಲ್ಯಾಭಿವೃದ್ಧಿ ಯೋಜನೆಯು, ಯುದ್ಧ ಪೀಡಿತ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ 15 ಸಾವಿರ ಭಾರತೀಯ ಉದ್ಯೋಗಿಗಳ ನೇಮಕಾತಿಗೆ ಅನುಕೂಲ ಮಾಡುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ನವದೆಹಲಿ (ಅ.5): ‘ಮೋದಿ ಸರ್ಕಾರದ ಕೌಶಲ್ಯಾಭಿವೃದ್ಧಿ ಯೋಜನೆಯು, ಯುದ್ಧ ಪೀಡಿತ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ 15 ಸಾವಿರ ಭಾರತೀಯ ಉದ್ಯೋಗಿಗಳ ನೇಮಕಾತಿಗೆ ಅನುಕೂಲ ಮಾಡುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಖರ್ಗೆ ‘ಮೋದಿ ಸರ್ಕಾರದ ಯುವ ವಿರೋಧಿ ನೀತಿಯಿಂದ ಉಂಟಾದ ನಿರುದ್ಯೋಗವನ್ನು ಇದು ಹೇಳುತ್ತದೆ. ಕೌಶಲ್ಯವಿಲ್ಲದ, ಅರೆ ಕೌಶಲ್ಯವಿರುವ ವಿದ್ಯಾವಂತ ಯುವಕರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಯುದ್ಧ ಪೀಡಿತ ಸ್ಥಳಗಳಲ್ಲಿ ಹೆಚ್ಚಿನ ಸಂಬಳಕ್ಕೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ. 

 

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಪಮಾನಕರ ಭಾಷಣ: ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ಮಂಜೂರು

ಮೋದಿ ಸರ್ಕಾರದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಯೋಜನೆಯು ಪಶ್ಚಿಮ ಏಷ್ಯಾದ ಯುದ್ಧದ ನಡುವೆ ಇಸ್ರೇಲ್‌ನಲ್ಲಿ 15 ಸಾವಿರ ಭಾರತೀಯ ಉದ್ಯೋಗಿಗಳ ನೇಮಕಾತಿಗೆ ಅನುಕೂಲ ಮಾಡಿಕೊಡುತ್ತಿದೆ. ಈ ಸಂಘರ್ಷದ ವಲಯಗಳಲ್ಲಿ ಕೆಲಸಕ್ಕೆ ಹೆಚ್ಚು ಬಲವಂತವಾಗಿರುವ ಹರ್ಯಾಣದ ಯುವಕರು ಮೋದಿಗೆ ಪಾಠ ಕಲಿಸುತ್ತಾರೆ’ ಎಂದು ಬರೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ
ಬೀದಿಯಲ್ಲಿ ಬಿದ್ದಿದ್ದ ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೀಡಿಯೋ ಭಾರಿ ವೈರಲ್