
ಕೋಲ್ಕತಾ(ಜು.08): ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ತಮ್ಮ ಎದುರಾಳಿಯಾದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರ ವಿಧಾನಸಭೆ ಪ್ರವೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಾಧೀಶರು ಹಿಂದೆ ಸರಿಯಬೇಕೆಂದು ಕೋರಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ 5 ಲಕ್ಷ ರು. ದಂಡ ವಿಧಿಸಲಾಗಿದೆ.
ಕಲ್ಕತ್ತಾ ಹೈಕೋರ್ಟ್ನ ಹಾಲಿ ನ್ಯಾಯಾಧೀಶ ಕೌಶಿಕ್ ಚಂದಾ ಅವರು ವಕೀಲರಾಗಿದ್ದಾಗ ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಸುವೇಂದು ಅಧಿಕಾರಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ.ಕೌಶಿಕ್ ಚಂದಾ ಅವರು, ‘ಇಂಥ ಲೆಕ್ಕಾಚಾರ, ಮಾನಸಿಕ ಮತ್ತು ಆಕ್ರಮಣಕಾರಿ ನೀತಿ ಪ್ರಯೋಗಿಸುವವರ ಹಿಮ್ಮೆಟ್ಟಿಸುವ ಅಗತ್ಯವಿದೆ. ಇದಕ್ಕಾಗಿ ಅರ್ಜಿದಾರರು(ಬ್ಯಾನರ್ಜಿ) 2 ವಾರಗಳಲ್ಲಿ 5 ಲಕ್ಷ ರು. ಅನ್ನು 2 ವಾರದೊಳಗೆ ಪಶ್ಚಿಮ ಬಂಗಾಳ ಬಾರ್ ಕೌನ್ಸಿಲ್ನಲ್ಲಿ ಠೇವಣಿ ಇಡಬೇಕು’ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ