ಮೋದಿ, ವಿಪಕ್ಷ ನಾಯಕರ ಭೇಟಿಗೆ ದಿಲ್ಲಿಗೆ ದೀದಿ ಆಗಮನ!

Published : Jul 27, 2021, 11:09 AM IST
ಮೋದಿ, ವಿಪಕ್ಷ ನಾಯಕರ ಭೇಟಿಗೆ ದಿಲ್ಲಿಗೆ ದೀದಿ ಆಗಮನ!

ಸಾರಾಂಶ

* ಬಂಗಾಳದಲ್ಲಿ ನಕಲಿ ಕೋವಿಡ್‌ ಲಸಿಕಾಕರಣ, ಚುನಾವಣೋತ್ತರ ಹಿಂಸಾಚಾರಗಳು ಸೇರಿ ಇನ್ನಿತರ ವಿಚಾರಗಳಿಂದ ರಾಜ್ಯದಲ್ಲಿ ದೀದಿ ವಿರುದ್ಧ ಟೀಕೆ * ಮೋದಿ, ವಿಪಕ್ಷ ನಾಯಕರ ಭೇಟಿಗೆ ದಿಲ್ಲಿಗೆ ದೀದಿ ಆಗಮನ

ನವದೆಹಲಿ/ಕೋಲ್ಕತಾ(ಜು.27): ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹಾಗೂ ವಿಪಕ್ಷಗಳ ನಾಯಕರ ಭೇಟಿಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರದಿಂದ 5 ದಿನಗಳ ದೆಹಲಿ ಪ್ರವಾಸ ಆರಂಭಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬ್ಯಾನರ್ಜಿ ಅವರು, ತಮ್ಮ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದಿನಾಂಕ ನಿಗದಿ ಮಾಡಿದ್ದಾರೆ. ಜೊತೆಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಭೇಟಿಗೆ ದೆಹಲಿ ತೆರಳುತ್ತಿದ್ದೇನೆ ಎಂದಷ್ಟೇ ಹೇಳಿದ್ದಾರೆ. ಆದರೆ ಮೋದಿ ಜತೆಗಿನ ಭೇಟಿ ವೇಳೆ ಏನೆಲ್ಲಾ ಚರ್ಚೆಗಳು ನಡೆಯಲಿವೆ ಎಂಬ ಮಾಹಿತಿಯನ್ನು ಅವರು ಬಹಿರಂಗಪಡಿಸಿಲ್ಲ.

ಆದರೆ ಇತ್ತೀಚೆಗಷ್ಟೇ ಬಿಜೆಪಿಯ ಅಬ್ಬರ ಮತ್ತು ಘಟಾನುಘಟಿ ನಾಯಕರ ಪ್ರಚಾರದ ಹೊರತಾಗಿಯೂ, ಬಂಗಾಳದಲ್ಲಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ದೀದಿ ಅವರು 2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದ ನಾಯಕರ ಬೆಂಬಲ ಪಡೆಯುವ ನಿಟ್ಟಿನಲ್ಲಿ ಮಮತಾ ಈ ಭೇಟಿ ಕೈಗೊಂಡಿದ್ದಾರೆ ಎನ್ನಲಾಗಿದೆ.

ಏತನ್ಮಧ್ಯೆ, ಬಂಗಾಳದಲ್ಲಿ ನಕಲಿ ಕೋವಿಡ್‌ ಲಸಿಕಾಕರಣ, ಚುನಾವಣೋತ್ತರ ಹಿಂಸಾಚಾರಗಳು ಸೇರಿ ಇನ್ನಿತರ ವಿಚಾರಗಳಿಂದ ರಾಜ್ಯದಲ್ಲಿ ದೀದಿ ವಿರುದ್ಧ ಟೀಕೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಕೆಲ ದಿನ ಬಂಗಾಳದಿಂದ ದೂರ ಉಳಿಯಲು ಮಮತಾ ಬ್ಯಾನರ್ಜಿ ದಿಲ್ಲಿ ಯಾತ್ರೆ ಕೈಗೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!