ಕೋಲ್ಕತ್ತಾ ಬೀದಿಯಲ್ಲಿ ಸಾವಿರಾರು ಜನರ ಮಧ್ಯೆ ದೀದಿ: CAA ವಿರುದ್ಧ ಪ್ರತಿಭಟನೆ!

Published : Dec 16, 2019, 02:59 PM ISTUpdated : Dec 16, 2019, 05:45 PM IST
ಕೋಲ್ಕತ್ತಾ ಬೀದಿಯಲ್ಲಿ ಸಾವಿರಾರು ಜನರ ಮಧ್ಯೆ ದೀದಿ: CAA ವಿರುದ್ಧ ಪ್ರತಿಭಟನೆ!

ಸಾರಾಂಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ.ಬಂಗಾಳದಲ್ಲಿ ಪ್ರತಿಭಟನಾ ಮೆರವಣಿಗೆ| ಪ್ರತಿಭಟನೆಯ ನೇತೃತ್ವ ವಹಿಸಿದ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ| ಮಮತಾ ನೇತೃತ್ವದ CAA ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಲಕ್ಷಾಂತರ ಜನ| CAA ಸಂವಿಧಾನದ ಆಶೋತ್ತರಗಳಿಗೆ ವಿರುದ್ಧವಾಗಿದೆ ಎಂದ ಮಮತಾ ಬ್ಯಾನರ್ಜಿ| 'ಕಾಯ್ದೆಯ ಜಾರಿಯಿಂದ ಸಮಾಜದಲ್ಲಿ ಧಾರ್ಮಿಕ ಅಂತರ ಮತ್ತಷ್ಟು ಹೆಚ್ಚಾಗಲಿದೆ'| ಮಮತಾ ಪ್ರತಿಭಟನೆಯ ನೇತೃತ್ವವ ವಹಿಸಿದ್ದಕ್ಕೆ ರಾಜ್ಯಪಾಲ ಗರಂ|

ಕೋಲ್ಕತ್ತಾ(ಡಿ.16): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ಭಾರೀ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.

"

ಸಾವಿರಾರು CAA ವಿರೋಧಿ ಪ್ರತಿಭಟನಾಕಾರರು ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪೌರತ್ವ ಕಾಯ್ದೆಯಲ್ಲಿ ಬದಲಾವಣೆ?: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುಳಿವು!

ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಹೊರಟಿರುವ ಬಿಜೆಪಿಯ ಕುತಂತ್ರಗಳನ್ನು ಸೋಲಿಸುವಂತೆ ಜನತೆಗೆ ಕರೆ ನೀಡಿದರು.

CAA ಸಂವಿಧಾನದ ಆಶೋತ್ತರಗಳಿಗೆ ವಿರುದ್ಧವಾಗಿದ್ದು, ಈ ಕಾಯ್ದೆಯ ಜಾರಿಯಿಂದ ಸಮಾಜದಲ್ಲಿ ಧಾರ್ಮಿಕ ಅಂತರ ಮತ್ತಷ್ಟು ಹೆಚ್ಚಾಗಲಿದೆ ಎಂದು ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟರು.

ಇನ್ನು ರಾಜ್ಯದ ಮುಖ್ಯಮಂತ್ರಿಯೇ ಪ್ರತಿಭಟನೆಯ ನೇತೃತ್ವ ವಹಿಸಿದ್ದಕ್ಕೆ ರಾಜ್ಯಪಾಲ ಜಗದೀಪ್ ಧನ್ಕರ್, ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಅಸಾಂವಿಧಾನಿಕ ಎಂದು ಧನ್ಕರ್ ಟ್ವಿಟ್ ಮಾಡಿದ್ದಾರೆ.

CAB ಪ್ರತಿಭಟನೆಗೆ ಕಾಂಗ್ರೆಸ್ ಕಾರಣ: ಮೋದಿ ಆರೋಪ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು