ಅಮಾನತುಗೊಂಡಿದ್ದ ಪೊಲೀಸ್‌ ಅಧಿಕಾರಿಗಳನ್ನು ಸಿಎಂ ಆದ ಬೆನ್ನಲ್ಲೇ ವಾಪಸ್ ಕರೆಸಿದ ಮಮತಾ!

Published : May 06, 2021, 04:00 PM ISTUpdated : May 06, 2021, 04:02 PM IST
ಅಮಾನತುಗೊಂಡಿದ್ದ  ಪೊಲೀಸ್‌ ಅಧಿಕಾರಿಗಳನ್ನು ಸಿಎಂ ಆದ ಬೆನ್ನಲ್ಲೇ ವಾಪಸ್ ಕರೆಸಿದ ಮಮತಾ!

ಸಾರಾಂಶ

ಪಶ್ಚಿಮ ಬಂಗಾಳ ಚುನಾವಣೆ ವೇಳೆ ನಡೆದ ಹಿಂಸಾಚಾರ ಹಾಗೂ ಪ್ರಾಥಮಿಕ ತನಿಖಾ ವರದಿ ಆಧರಿಸಿ ಚುನಾವಣಾ ಆಯೋಗ ಪೊಲೀಸ್ ಅಧಿಕಾರಿಗಳನ್ನು ಅಮಾನತು  ಮಾಡಿತ್ತು. ಆದರೆ  ಆಪ್ತರನ್ನು ಮಮತಾ ಬ್ಯಾನರ್ಜಿ 3ನೇ ಬಾರಿಗೆ ಅಧಿಕಾರಕ್ಕೇರಿದ ಬೆನ್ನಲ್ಲೇ ವಾಪಸ್ ಕರೆಯಿಸಿಕೊಂಡಿದ್ದಾರೆ.

ಕೋಲ್ಕತಾ(ಮೇ.06); ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೂಚ್ ಬೆಹಾರ್ ಘಟನೆ ಯಾರು ಮರೆತಿಲ್ಲ. ಮತದಾನದ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದರು. ಘಟನೆ ಬೆನ್ನಲ್ಲೇ ಚುನಾವಣಾ ಆಯೋಗ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದರು. ಆದರೆ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಅಮಾನತುಗೊಂಡಿರುವ ಅಧಿಕಾರಿಗಳನ್ನು ವಾಪಸ್ ಕರೆಯಿಸಿದ್ದಾರೆ.

3ನೇ ಬಾರಿ ಪಶ್ಚಿಮ ಬಂಗಾಳ ಸಿಎಂ ಆಗಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ!

ಸತತ 3ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ಮಮತಾ ಬ್ಯಾನರ್ಜಿ 29 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಈ ವರ್ಗಾವಣೆ ಹಾಗೂ ಬದಲಾವಣೆ ಆದೇಶದಲ್ಲಿ ಕೂಚ್ ಬೆಹಾರ್ ಹಿಂಸಾಚರದಿಂದ ಅಮಾನತುಗೊಂಡಿದ್ದ ಪೊಲೀಸ್ ಅಧಿಕಾರಿಗಳನ್ನು ಮತ್ತೆ ವಾಪಸ್ ಸೇವೆಗೆ ಕರೆಯಿಸಿಕೊಂಡಿದ್ದಾರೆ.

ಕೂಚ್ ಬೆಹಾರ್ ಘಟನೆ ಬಳಿಕ ಚುನಾವಣಾ ಆಯೋಗ ಅಮಾನತು ಮಾಡಿದ್ದ ಡಿಜಿ ವೀರೇಂದ್ರ, ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಜಾವೇದ್ ಶಮೀಮ್ ಮತ್ತು ಡಿಜಿ ಸೆಕ್ಯುರಿಟಿ ವಿವೇಕ್ ಸಹಯ್ ಅವರನ್ನು ಹಿಂದಿನ ಸ್ಥಾನಗಳಿಗೆ ನೇಮಕ ಮಾಡಿ ಮಮತಾ ಬ್ಯಾನರ್ಜಿ ಆದೇಶ ಹೊರಡಿಸಿದ್ದಾರೆ.

14 ಬಿಜೆಪಿ ಕಾರ‍್ಯಕರ್ತರ ಹತ್ಯೆ, ಲಕ್ಷ ಮಂದಿ ಗುಳೆ!

ಏಪ್ರಿಲ್ 10 ರಂದು ನಡೆದ ಮತದಾನದ ವೇಳೆ ಕೂಚ್ ಬೆಹಾರ್‌ನ ಸಿತಾಲ್‌ಕುಚಿ ಕ್ಷೇತ್ರದಲ್ಲಿ ಹಿಂಸಾಚರ ನಡೆದಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ  ಸಿಐಎಸ್ಎಫ್ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ಘಟನೆ ಹೊಣೆಯಾಗಿಸಿ ಕೂಚ್ ಬೆಹಾರ್ ಜಿಲ್ಲೆಯ ಎಸ್‌ಪಿ ದೇಬಾಶಿಸ್ ಧಾರ್ ಅವರನ್ನು ಮಮತಾ ಬ್ಯಾನರ್ಜಿ ಸರ್ಕಾರ ಅಮಾನತುಗೊಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?