ಕುಂಭಮೇಳಕ್ಕೆ ಬೆಂಬಲ, ಗಂಗಾಸಾಗರ ಕಡೆಗೆ ತಿರುಗಿಯೂ ನೋಡೋಲ್ಲ: ಪ್ರಧಾನಿ ಮೋದಿ ವಿರುದ್ಧ ಮಮತಾ ವಾಗ್ದಾಳಿ!

Published : Jan 06, 2025, 11:41 PM ISTUpdated : Jan 06, 2025, 11:52 PM IST
ಕುಂಭಮೇಳಕ್ಕೆ ಬೆಂಬಲ, ಗಂಗಾಸಾಗರ ಕಡೆಗೆ ತಿರುಗಿಯೂ ನೋಡೋಲ್ಲ: ಪ್ರಧಾನಿ ಮೋದಿ ವಿರುದ್ಧ ಮಮತಾ ವಾಗ್ದಾಳಿ!

ಸಾರಾಂಶ

ಬಿಜೆಪಿ ಸರ್ಕಾರ ಕುಂಭಮೇಳಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಿ ಬೆಂಬಲಿಸುತ್ತದೆ. ಆದರೆ ಗಂಗಾಸಾಗರದತ್ತ ತಿರುಗಿಯೂ ನೋಡುತ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು.

ಪ.ಬಂಗಾಳ (ಜ.6): ಬಿಜೆಪಿ ಸರ್ಕಾರ ಕುಂಭಮೇಳಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಿ ಬೆಂಬಲಿಸುತ್ತದೆ. ಆದರೆ ಗಂಗಾಸಾಗರದತ್ತ ತಿರುಗಿಯೂ ನೋಡುತ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು.

ಪ್ರತಿ ವರ್ಷ ನಡೆಯುವಂತೆ ಈ ಬಾರಿಯೂ ಗಂಗಾಸಾಗರ ಮೇಳ ನಡೆಸಲಿದ್ದು, ಅದರ ಸಿದ್ಧತೆಗಳನ್ನಗಳನ್ನು ಮಮತಾ ಬ್ಯಾನರ್ಜಿ ಇಂದು(ಜ.6) ಪರಿಶೀಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಗಂಗಾಸಾಗರದ ಒಂದು ಬದಿಯಲ್ಲಿ ಸುಂದರ್‌ಬನ್‌ಗಳಿವೆ, ಒಂದು ಕಡೆ ಅರಣ್ಯವಿದೆ, ಇನ್ನೊಂದು ಬದಿಯಲ್ಲಿ ಸಾಗರ, ದೇವಾಲಯಗಳು ಮತ್ತು ಭಕ್ತರು. ಇದು ತುಂಬಾ ಅದ್ಭುತವಾಗಿದೆ. ಯಾವುದೇ ಭಕ್ತರಿಗೆ ತೊಂದರೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ವ್ಯವಸ್ಥೆ ಮಾಡುತ್ತದೆ. ಈಗಾಗಲೇ ಸಮನ್ವಯ ಸಭೆಗಳನ್ನು ನಡೆಸಿದೆ ಎಂದರು.

ಗಂಗಾಸಾಗರಕ್ಕೆ ಒಂದು ಸೇತುವೆ ನಿರ್ಮಿಸಲು ಸಾಧ್ಯವಾಗಿಲ್ಲ:

ಉತ್ತರ ಪ್ರದೇಶದ ಪ್ರಯಾಗರಾಜ್ ಕುಂಭ ಮೇಳಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡಿದೆ. .ಆದರೆ ಪಶ್ಚಿಮ ಬಂಗಾಳದ ಗಂಗಾಸಾಗರ ಸೇತುವೆ ನಿರ್ಮಿಸಲು ಪ್ರಧಾನಿಗೆ ಸಾಧ್ಯವಾಗಿಲ್ಲ. ಜನರು ಗಂಗಾಸಾಗರಕ್ಕೆ ನೀರಿನ ಮಾರ್ಗವಾಗಿ ಬರಬೇಕು. ಇದಕ್ಕಾಗಿ ಕೇಂದ್ರ ಸರ್ಕಾರ ಸೇತುವೆ ನಿರ್ಮಿಸಬೇಕು ಆದರೆ ಇದ್ಯಾವುದಕ್ಕೂ ಗಮನಹರಿಸಿಲ್ಲ. ಇದೀಗ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಟೆಂಡರ್ ಕರೆದಿದೆ. ಇದರ ನಂತರ ಇದು ಸಾಕಷ್ಟು ಅನುಕೂಲವಾಗಲಿದೆ.. ಗಂಗಾಸಾಗರಕ್ಕೆ ಬರುವ ಭಕ್ತರಿಗೆ ಪ್ರಯಾಣ ಸುಖಕರವಾಗಿರಲಿ ಎಂದು ಹಾರೈಸುತ್ತೇವೆ. ನಾವು ಪೊಲೀಸ್, PWD ಮತ್ತು PHE ನಂತಹ ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಿದ್ದೇವೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಇಲ್ಲಿನ ಕಪಿಲ ಮುನಿ ಆಶ್ರಮದಿಂದ ಆಯೋಧ್ಯೆಗೆ ದೇಣಿಗೆ ನೀಡಲಾಗಿದೆ

ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಾಂತಿಯಂದು ನಡೆಯುವ ಗಂಗಾಸಾಗರ ಜಾತ್ರೆಗೆ ವ್ಯವಸ್ಥೆ ಮಾಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಗಾಸಾಗರ ದ್ವೀಪಕ್ಕೆ ಎರಡು ದಿನಗಳ ಭೇಟಿ ನೀಡಿದರು. ಕಪಿಲ್ ಮುನಿ ಆಶ್ರಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬ್ಯಾನರ್ಜಿ, "ಈ ಹಿಂದೆ ಗಂಗಾಸಾಗರದಲ್ಲಿ ಏನೂ ಇರಲಿಲ್ಲ. ನಾವು ಈ ಸ್ಥಳಕ್ಕೆ ನಮ್ಮಿಂದ ಸಾಧ್ಯವಿರುವ ಎಲ್ಲ ವ್ಯವಸ್ಥೆ ಮಾಡುತ್ತಿದ್ದೇವೆ. ನಾನು ಇಲ್ಲಿ ಮಹಾರಾಜ್ ಜಿ ಅವರನ್ನು ಭೇಟಿ ಮಾಡಿದ್ದೇನೆ. ಪ್ರತಿ ವರ್ಷ ಕಪಿಲ್ ಮುನಿ ಆಶ್ರಮಕ್ಕೆ ದೇಣಿಗೆ ನೀಡಲು ಲಕ್ಷಾಂತರ ಭಕ್ತರು ಬರುತ್ತಾರೆ. ಆದರೆ ಎಲ್ಲಾ ದೇಣಿಗೆಗಳನ್ನು ಅಯೋಧ್ಯೆಗೆ ಕಳುಹಿಸಲಾಗುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!