ತಾಜ್‌ಮಹಲ್‌ನಿಂದ ಏಕಾ ಏಕಿ ಪ್ರವಾಸಿಗರು ಹೊರಕ್ಕೆ : ಕಾರಣ?

Kannadaprabha News   | Asianet News
Published : Mar 05, 2021, 07:51 AM ISTUpdated : Mar 05, 2021, 08:15 AM IST
ತಾಜ್‌ಮಹಲ್‌ನಿಂದ ಏಕಾ ಏಕಿ ಪ್ರವಾಸಿಗರು ಹೊರಕ್ಕೆ  : ಕಾರಣ?

ಸಾರಾಂಶ

ವಿಶ್ವ ಪ್ರಸಿದ್ಧ ತಾಜ್‌ ಮಹಲ್‌ನಿಂದ ಏಕಾ ಏಕಿ ಅಲ್ಲಿನ ಭದ್ರತಾ ಸಿಬ್ಬಂದಿ ಪ್ರವಾಸಿಗರನ್ನ ಹೊರಕ್ಕೆ ಕಳಿಸಿ ತಪಾಸಣೆ ನಡೆಸಿದರು. ಹುಸಿ ಬಾಂಬ್ ಕರೆ ಹಿನ್ನೆಲೆ ಸೃಷ್ಟಿಯಾಗಿದ್ದ ಆತಂಕ ನಿವಾರಿಸಿದ್ದು, ಆರೋಪಿಯನ್ನು ಅರೆಸ್ಟ್ ಮಾಡಲಾಯಿತು.

ಆಗ್ರಾ (ಮಾ.05): ಇಲ್ಲಿನ ತಾಜ್‌ಮಹಲ್‌ನಲ್ಲಿ ಬಾಂಬ್‌ ಇರುವುದಾಗಿ ಕಿಡಿಗೇಡಿಯೊಬ್ಬ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಭಾರೀ ಆತಂಕ ಸೃಷ್ಟಿಯಾದ ಘಟನೆ ಗುರುವಾರ ನಡೆದಿದೆ. 

ಬೆಳಿಗ್ಗೆ 9 ಗಂಟೆ ವೇಳೆಗೆ ಉತ್ತರ ಪ್ರದೇಶದ ಪೊಲೀಸರ ತುರ್ತು ಸ್ಪಂದಿಸುವ 112 ಸಂಖ್ಯೆಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಸ್ಮಾರಕದ ಒಳಗೆ ಬಾಂಬ್‌ ಇರುವುದಾಗಿ ಮಾಹಿತಿ ನೀಡಿದ್ದ. ಪೊಲೀಸರು ತತ್‌ಕ್ಷಣವೇ ಅಲ್ಲಿನ ಭದ್ರತಾ ಪಡೆಗೆ ಮಾಹಿತಿ ನೀಡಿ, ಕೂಡಲೇ ಪ್ರವಾಸಿಗರನ್ನೆಲ್ಲಾ ಆವರಣದಿಂದ ಹೊರಗೆ ಕಳುಹಿಸಿ ತಪಾಸಣೆ ನಡೆಸಿದರು.

ಇದು ತಾಜ್ ಮಹಲ್ ಅಲ್ವೇ ಅಲ್ಲ, ಹೀಗಿದೆ ನೋಡಿ Microsoft ಹೊಸ ಆಫೀಸ್! ...

ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಆಗ್ರಾ ಪೊಲೀಸ್‌ ಮಹಾ ನಿರ್ದೇಶಕ ಸತೀಶ್‌ ಗಣೇಶ್‌ ತಿಳಿಸಿದ್ದಾರೆ. ಬಳಿಕ ಇದೊಂದು ಹುಸಿ ಕರೆ ಎಂದು ಖಚಿತಪಟ್ಟಿದ್ದು, ಈ ಸಂಬಂಧ ವಿಮಲ್‌ ಕುಮಾರ್‌ ಸಿಂಗ್‌ ಎಂಬಾತನನ್ನು ಬಂಧಿಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ