
ಲಕ್ನೋ(ಡಿ.28): ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಲು ವ್ಯಕ್ತಿಯೋರ್ವ ಭದ್ರತಾ ವ್ಯವಸ್ಥೆಯನ್ನು ಸೀಳಿ ಮುನ್ನಗಿದ ಘಟನೆ ನಡೆದಿದೆ.
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿದ್ದ ಪ್ರಿಯಾಂಕಾ ಗಾಂಧಿ, ಇತರ ನಾಯಕರೊಂದಿಗೆ ವೇದಿಕೆ ಮೇಲೆ ಕುಳಿತಿದ್ದರು. ಈ ವೇಳೆ ವೇದಿಕೆಯತ್ತ ಏಕಾಏಕಿ ನುಗ್ಗಿದ ಅಭಿಮಾನಿಯೋರ್ವ ಪ್ರಿಯಾಂಕಾ ಅವರೊಂದಿಗೆ ಮಾತನಾಡಲು ಮುಂದಾಗಿದ್ದಾನೆ.
ರಾಹುಲ್ರಂಥದ್ದೇ ಕಾರಲ್ಲಿ ಪ್ರಿಯಾಂಕ ಮನೆಗೆ ಅಪರಿಚಿತರು!
ಈ ವೇಳೆ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಕೂಡಲೇ ವ್ಯಕ್ತಿಯನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ವ್ಯಕ್ತಿಯನ್ನು ಬಿಡುವಂತೆ ಭದ್ರತಾ ಸಿಬ್ಬಂದಿಗೆ ಆದೇಶ ನೀಡಿದ ಪ್ರಿಯಾಂಕಾ, ಆತನೊಂದಿಗೆ ಆತ್ಮೀಯವಾಗಿ ಮಾತನಾಡಿದರು.
ಗಾಂಧಿ ಪರಿವಾರಕ್ಕೆ ಎಸ್ಪಿಜಿ ಭದ್ರತೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದ ಬಳಿಕ ಹಲವು ಬಾರಿ ಭದ್ರತಾ ಲೋಪ ನಡೆದಿದ್ದು, ಹೀಗಾಗಿ ನಿಯೋಜಿತ ಭದ್ರತಾ ಸಿಬ್ಬಂದಿ ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ.
SPG ಭದ್ರತೆ ಹಿಂತೆಗೆತ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಮನೆಗೆ 7 ಜನ ಅಪರಿಚಿತರ ಪ್ರವೇಶ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ