23 ಲಕ್ಷ ಬಿಲ್ ಕೊಡದೆ ದೆಹಲಿ ಲೀಲಾ ಪ್ಯಾಲೇಸ್‌ನಿಂದ ಪರಾರಿಯಾದವ ಮಂಗಳೂರಿನಲ್ಲಿ ಅಂದರ್

Published : Jan 22, 2023, 05:04 PM ISTUpdated : Jan 22, 2023, 05:05 PM IST
23 ಲಕ್ಷ ಬಿಲ್ ಕೊಡದೆ ದೆಹಲಿ ಲೀಲಾ ಪ್ಯಾಲೇಸ್‌ನಿಂದ ಪರಾರಿಯಾದವ ಮಂಗಳೂರಿನಲ್ಲಿ ಅಂದರ್

ಸಾರಾಂಶ

ಅಬುಧಾಬಿ ರಾಜಮನೆತನದ ನಿಕಟವರ್ತಿ ಎಂದು ಹೇಳಿಕೊಂಡು ದೆಹಲಿಯ ಪಂಚತಾರಾ ಹೊಟೇಲ್ ಲೀಲಾ ಪ್ಯಾಲೇಸ್‌ನಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ವಾಸವಿದ್ದು, ಬಳಿಕ ಹೊಟೇಲ್ ಬಿಲ್ ನೀಡದೇ ಪರಾರಿಯಾಗಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ರಾಜ್ಯದ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಮಂಗಳೂರು/ ದೆಹಲಿ: ಅಬುಧಾಬಿ ರಾಜಮನೆತನದ ನಿಕಟವರ್ತಿ ಎಂದು ಹೇಳಿಕೊಂಡು ದೆಹಲಿಯ ಪಂಚತಾರಾ ಹೊಟೇಲ್ ಲೀಲಾ ಪ್ಯಾಲೇಸ್‌ನಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ವಾಸವಿದ್ದು,  ಬಳಿಕ ಹೊಟೇಲ್ ಬಿಲ್ ನೀಡದೇ ಪರಾರಿಯಾಗಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ರಾಜ್ಯದ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. 41 ವರ್ಷ ಪ್ರಾಯದ ಮಹಮ್ಮದ್ ಶರೀಫ್  ಎಂದು ಆರೋಪಿಯನ್ನು ಗುರುತಿಸಲಾಗಿದೆ. ಈತ ನಕಲಿ ಬ್ಯುಸಿನೆಸ್ ಕಾರ್ಟ್ ಹಾಗೂ ದಾಖಲೆಗಳನ್ನು ನೀಡಿ ಕಳೆದ ವರ್ಷ ದೆಹಲಿಯ ಲೀಲಾ ಪ್ಯಾಲೇಸ್ ಹೊಟೇಲ್‌ನಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ವಾಸವಿದ್ದ

ಯುನೈಟೆಡ್ ಅರಬ್ ಎಮಿರೇಟ್ಸ್ (United Arab Emirates) ಸರ್ಕಾರದ ನಿಕಟವರ್ತಿ ಎಂದು ಹೇಳಿಕೊಂಡು ಈತ ದೆಹಲಿಯ ಪ್ರಖ್ಯಾತ ಪಂಚತಾರಾ ಹೊಟೇಲ್‌ನಲ್ಲಿ ರೂಮ್ ಪಡೆದಿದ್ದ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಹೊಟೇಲ್‌ಗೆ ಆಗಮಿಸಿದ ಈತ ನವಂಬರ್ ಅಂತ್ಯದವರೆಗೂ ಅಲ್ಲೇ ಇದ್ದ. ಇದಾದ ನಂತರ ನವಂಬರ್‌ನಲ್ಲಿ ಅಲ್ಲಿ ರೂಮ್ ಖಾಲಿ ಮಾಡಿದ ಆರೋಪಿ ಈ ವೇಳೆ 20 ಲಕ್ಷ ಬಿಲ್‌ಗೆ ಚೆಕ್‌ ನೀಡಿದ್ದ. ಆದರೆ ಅದು ಸರಿ ಇಲ್ಲದ ಕಾರಣ ಚೆಕ್ ಬೌನ್ಸ್ (Cheque Bounce) ಆಗಿದೆ ಎಂದು ತಿಳಿದು ಬಂದಿದೆ. ಅಲ್ಲದೇ ಈತ ಹೊಟೇಲ್‌ನಿಂದ ತೆರಳುವ ವೇಳೆ ಬೆಳ್ಳಿ ಪಾತ್ರೆಗಳು ಸೇರಿದಂತೆ ಕೆಲ ಅಮೂಲ್ಯ ವಸ್ತುಗಳನ್ನು ಹೊಟೇಲ್‌ನಿಂದ ಕದ್ದೊಯ್ದಿದ್ದಾನೆ ಎಂದು ಹೊಟೇಲ್ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದರು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. 

ಉಂಡು ಹೋದ ಕೊಂಡು ಹೋದ: 23 ಲಕ್ಷ ಬಿಲ್ ನೀಡದೇ ಫೈವ್ ಸ್ಟಾರ್ ಹೊಟೇಲ್‌ನಿಂದ ಪರಾರಿ

ಬಂಧಿತ ಆರೋಪಿ ಮೂಲತಃ ರಾಜ್ಯದ ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯವನಾಗಿದ್ದು, 23,46,413.  ಲಕ್ಷ ಹೊಟೇಲ್ ಬಿಲ್ ಅನ್ನು ಪಾವತಿಸದೇ ಪರಾರಿಯಾಗಿದ್ದ. ಇದರಿಂದ ಹೊಟೇಲ್‌ಗೆ ಧೀರ್ಘ ಮೊತ್ತದ ನಷ್ಟ ಉಂಟಾಗಿತ್ತು.  ಈ ಘಟನೆಯ ನಂತರ ಹೊಟೇಲ್ ಮ್ಯಾನೇಜರ್ ಅನುಪಮ ದಾಸ್ ಗುಪ್ತಾ (Anupam Das Gupta) ಅವರು ಜನವರಿ 14 ರಂದು ದೆಹಲಿಯ ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದರು. ದೂರನ್ನಾಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. 

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 419, 420, 380ರ ಅಡಿ ಲೀಲಾ ಪ್ಯಾಲೇಸ್ ಹೊಟೇಲ್‌ನ ( Hotel Leela Palace) ಜನರಲ್ ಮ್ಯಾನೇಜರ್ ಅನುಪಮ ಅವರು ಕೇಸ್ ದಾಖಲಿಸಿದ್ದು,  ದೂರಿನ ಪ್ರಕಾರ, ಆರೋಪಿ ಮಹಮ್ಮದ್ ಶರೀಫ್ ಆಗಸ್ಟ್ 1 ರಿಂದ  ನವಂಬರ್ 20ರವರೆಗೆ ಹೊಟೇಲ್‌ನಲ್ಲಿ ವಾಸವಿದ್ದ, ಹೊಟೇಲ್‌ನಿಂದ ಹೊರಟು ಹೋಗುವ ವೇಳೆ ಆತ ಅಲ್ಲಿದ್ದ ಅಮೂಲ್ಯ ವಸ್ತುಗಳನ್ನು ಕದ್ದೊಯ್ದಿದ್ದ  ಎಂದು ಹೇಳಲಾಗಿದೆ.  ದೂರಿನ ಬಳಿಕ ಈತನ ಬಂಧನಕ್ಕೆ ಬಲೆ ಬೀಸಿದ ದೆಹಲಿ ಪೊಲೀಸರು ತಂಡವೊಂದನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ನಂತರ ಜನವರಿ 19 ರಂದು ಶರೀಫ್‌ನನ್ನು (Mahamed Sharif) ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೆಹಲಿ ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.  

ಹೊಟೇಲ್ ಬಿಲ್ ಕಟ್ಟದೇ ಕಾಲ್ಕಿತ್ತ ಸ್ಟಾರ್ ನಟಿ! ದೂರು ದಾಖಲು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!