ಲೆ ಮೆರಿಡಿಯನ್ ಹೊಟೇಲ್‌ನ 12ನೇ ಮಹಡಿಯಿಂದ ಕೆಳಗೆ ಹಾರಿ 50 ವರ್ಷದ ವ್ಯಕ್ತಿ ಸಾವಿಗೆ ಶರಣು

Published : Jan 04, 2026, 03:57 PM IST
fall from hotel balcony Bengaluru

ಸಾರಾಂಶ

ರಾಜಧಾನಿ ಲೆ ಮೆರಿಡಿಯನ್ ಹೊಟೇಲ್‌ನ 12ನೇ ಮಹಡಿಯಿಂದ ಕೆಳಗೆ ಹಾರಿ 50 ವರ್ಷದ ಪರ್ವಿಂದರ್ ಸಿಂಗ್ ಜುನೇಜಾ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ನಡೆದ ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹೊಟೇಲ್‌ ಕಟ್ಟಡದ 12ನೇ ಮಹಡಿಯಿಂದ ಕೆಳಗೆ ಹಾರಿ 50 ವರ್ಷದ ವ್ಯಕ್ತಿಯೊಬ್ಬರು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಫೈವ್ ಸ್ಟಾರ್ ಹೊಟೇಲ್‌ ಆಗಿರುವ ಲೆ ಮೆರಿಡಿಯನ್ ಹೊಟೇಲ್‌ನ 12ನೇ ಮಹಡಿಯಿಂದ ಕೆಳಗೆ ಹಾರಿ ಇಂದು ಮಧ್ಯಾಹ್ನ ವ್ಯಕ್ತಿಯೊಬ್ಬರು ಸಾವಿಗೆ ಶರಣಾಗಿದ್ದಾರೆ.

ಮಧ್ಯಾಹ್ನ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 50 ವರ್ಷದ ಪರ್ವಿಂದರ್ ಸಿಂಗ್ ಜುನೇಜಾ ಎಂದು ಗುರುತಿಸಲಾಗಿದೆ. ಅವರು ದೆಹಲಿಯ ಲಜಪತ್‌ನಗರದ ನಿವಾಸಿಯಾಗಿದ್ದು, ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಕಾರಣವಾಗಿದ್ದು ಏನು ಎಂಬ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

ಇದನ್ನೂ ಓದಿ: ರೈಲು ನಿಲ್ದಾಣದ ಪಾರ್ಕಿಂಗ್ ಏರಿಯಾದಲ್ಲಿ ಬೆಂಕಿ: 500 ಬೈಕ್‌ಗಳು ಬೆಂಕಿಗಾಹುತಿ

ಪರ್ವಿಂದರ್ ಸಿಂಗ್ ಅವರು ಕೆಳಗೆ ಬಿದ್ದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆಗಮಿಸಿದ್ದು ತನಿಖೆಗೆ ಸಹಕರಿಸುತ್ತಿದ್ದಾರೆ. ಪರ್ವಿಂದರ್ ಜುನೇಜಾ ಅವರ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಘಟನೆಗೆ ಸಂಬಂಧಿಸಿದಂತೆ ಟ್ವಿಟ್ ಮಾಡಿದ್ದು, 50 ವರ್ಷದ ಪರ್ವಿಂದರ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಲೆ ಮೆರಿಡಿಯನ್ ಹೊಟೇಲ್‌ನಿಂದ ಹಾರಿ ಸಾವಿಗೆ ಶರಣಾಗಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಮಾಹಿತಿ ನೀಡಿದೆ. ಈ ವ್ಯಕ್ತಿ ಕ್ರಿಶ್ಮಸ್‌ ಸಮಯದಲ್ಲಿ ಹೊಟೇಲ್‌ಗೆ ಬಂದು ಸ್ಟೇ ಆಗಿದ್ದು, ನಂತರ ಹೊರಟು ಹೋಗಿದ್ದರು. ಭಾನುವಾರ ಅವರು ವಾಪಸ್ ಬಂದಿದ್ದು, ಈ ಆಘಾತಕಾರಿ ಕೃತ್ಯವೆಸಗಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಮಂಗಳೂರು: ಕಾಂಪೌಂಡ್ ಹಾರಿ ಮನೆ ಅಂಗಳಕ್ಕೆ ಬಂದು ಬಿದ್ದ ಕಾರು: ಚಾಲಕ ಪವಾಡದಂತೆ ಪಾರು: ವೀಡಿಯೋ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಮಾನ ಪ್ರಯಾಣಿಕರಿಗೆ ಹೊಸ ಸುರಕ್ಷತಾ ಮಾರ್ಗಸೂಚಿ ಪ್ರಕಟ, ಇನ್ಮೇಲೆ ಈ ವಸ್ತುಗಳನ್ನು ಒಯ್ಯುವಂತಿಲ್ಲ
ರೈಲು ನಿಲ್ದಾಣದ ಪಾರ್ಕಿಂಗ್ ಏರಿಯಾದಲ್ಲಿ ಬೆಂಕಿ: 500 ಬೈಕ್‌ಗಳು ಬೆಂಕಿಗಾಹುತಿ