
ಮುಂಬೈ: ವಾಣಿಜ್ಯ ನಗರಿ ಮುಂಬೈನ ಅಂಧೇರಿಯಲ್ಲಿ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ. 60 ವರ್ಷದ ಮಹಿಳೆಯೊಬ್ಬಳು ತನ್ನ ಗೆಳೆಯನನ್ನು ಭೇಟಿಯಾಗಲು 90 ಲಕ್ಷ ರೂಪಾಯಿ ನಗದು ಹಣದ ಜೊತೆ ಪ್ರಯಾಣಿಸುತ್ತಿದ್ದಾಳೆ ಎಂದು ದೆಹಲಿ ವಿಮಾನ ನಿಲ್ದಾಣಕ್ಕೆ ಕರೆ ಬಂದಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಈ ರೀತಿಯ ಕರೆ ಬರುತ್ತಿದ್ದಂತೆ ಶುಕ್ರವಾರ ಸಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆಯಲ್ಲಿ ಹುಸಿ ಕರೆ ಮಾಡಿದ್ದು ಮಹಿಳೆಯ ಸೋದರ ಸಂಬಂಧಿ ಎಂದು ತಿಳಿದು ಬಂದಿದೆ. ಕರೆ ಮಾಡಿರುವ ವ್ಯಕ್ತಿಯನ್ನು ಗೌರಿ ಭರ್ವಾನಿ ಎಂದು ಗುರುತಿಸಲಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಶುಕ್ರವಾರ ಬೆಳಗಿನ ಜಾವ 1.30ಕ್ಕೆ ಕರೆ ಬಂದಿತ್ತು.
60 ವರ್ಷದ ಮಹಿಳೆ ಮುಂಬೈನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಳೆ. ಅಲ್ಲಿಂದ ಆಕೆ ಉಜ್ಬೇಕಿಸ್ತಾನ ವಿಮಾನ ಹಿಡಿದು ಗೆಳೆಯನನ್ನು ಭೇಟಿಯಾಗಲು ತೆರಳುತ್ತಿದ್ದಾಳೆ. ಮಹಿಳೆ ಅಪಾರಪ್ರಮಾಣದ ಹಣದ ಜೊತೆ ಪ್ರಯಾಣಿಸುತ್ತಿದ್ದು, ಆಕೆಯನ್ನು ಆತ್ಮಹತ್ಯೆ ಬಾಂಬರ್ ಎಂಬಂತೆ ಬಿಂಬಿಸಿ ಹೇಳಲಾಗಿತ್ತು. ಈ ಕರೆ ಬರುತ್ತಿದ್ದಂತೆ ಮುಂಬೈನ ಅಧಿಕಾರಿಗಳಿಗೆ ಮಾಹಿತಿಯನ್ನು ರವಾನಿಸಲಾಗಿತ್ತು.
ಇದನ್ನೂ ಓದಿ: ವಿಮಾನಗಳಿಗೆ ಹುಸಿ ಬಾಂಬ್ ಕರೆ; ನೀವು ಅಪರಾಧಕ್ಕೆ ಬೆಂಬಲ ನೀಡುತ್ತಿದ್ದೀರಿ; ಎಕ್ಸ್ಗೆ ಕೇಂದ್ರ ತೀವ್ರ ತರಾಟೆ
ಈ ವಿಷಯ ತಿಳಿಯುತ್ತಿದ್ದಂತೆ ಎಲ್ಲಾ ತನಿಖಾ ಸಂಸ್ಥೆಗಳು ಕಾರ್ಯಪ್ರವೃತ್ತರಾಗಿ ಮಹಿಳೆಯನ್ನು ಪತ್ತೆ ಮಾಡಲು ಮುಂದಾಗಿದ್ದವು. ಮುಂಬೈನಿಂದ ದೆಹಲಿಗೆ ತೆರಳುವ ಎಲ್ಲಾ ಪ್ರಯಾಣಿಕರ ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಹುಸಿಕರೆ ಮಾಡಿದ್ದ ವ್ಯಕ್ತಿ ಮಹಿಳೆಯ ವಿಳಾಸವನ್ನು ಸಹ ನೀಡಿದ್ದನು. ಈ ವಿಳಾಸಕ್ಕೆ ತೆರಳಿ ಪರಿಶೀಲಿಸಿದಾಗ ಬಹಳ ದಿನಗಳ ಹಿಂದೆಯೇ ಮಹಿಳೆ ಅಲ್ಲಿಂದ ತೆರಳಿರುವ ವಿಷಯ ಗೊತ್ತಾಗಿದೆ. ಹಾಗೆ ಮಹಿಳೆ ಯಾವುದೇ ವಿಮಾನ ಟಿಕೆಟ್ ಬುಕ್ ಮಾಡದಿರೋದು ಸಹ ಖಚಿತವಾಗಿದೆ.
ಕರೆ ಮಾಡಿರುವ ವ್ಯಕ್ತಿ ಗೌರಿ ಭರ್ವಾನಿ ಮಹಿಳೆಯ ಸಂಬಂಧಿಯಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ
ಹುಸಿ ಕರೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಇದೀಗ ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ: ನಿನ್ನೆ ಮತ್ತೆ 50 ವಿಮಾನಗಳಿಗೆ ಹುಸಿಬಾಂಬ್ ಬೆದರಿಕೆ ಕಳೆದೆರಡು ವಾರದಲ್ಲಿ ಬಂದ ಬೆದರಿಕೆಗಳ ಸಂಖ್ಯೆ 350!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ