Vande Bharat Accident: ಖೈನಿ ಉಗುಳಲು ಹೋಗಿ ಪ್ರಾಣ ಕಳ್ಕೊಂಡ! ವಂದೇ ಭಾರತ್ ರೈಲಿಗೆ ಸಿಕ್ಕಿ ವ್ಯಕ್ತಿ ದುರ್ಮರಣ

Published : Mar 25, 2026, 05:08 PM IST
Man Spitting Tobacco On Tracks Hit And Killed By Vande Bharat Express In Bihar

ಸಾರಾಂಶ

ಬಿಹಾರದ ಬಾರ್ಹ್ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದ ಘಟನೆಯಲ್ಲಿ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಪಾಟ್ನಾ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣ. ಈ ನಿಲ್ದಾಣವು ಪೂರ್ವ ಮಧ್ಯೆ ರೈಲ್ವೆಯ ದಾನಾಪುರ ವಿಭಾಗದ ವ್ಯಾಪ್ತಿಗೆ ಬರುತ್ತದೆ.

ಮಂಗಳವಾರ ಬಿಹಾರದ ಬಾರ್ಹ್ ರೈಲ್ವೆ ನಿಲ್ದಾಣದಲ್ಲಿ ಪಾಟ್ನಾ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ನಿಲ್ದಾಣವು ಪೂರ್ವ ಮಧ್ಯೆ ರೈಲ್ವೆಯ (ECR) ದಾನಾಪುರ ವಿಭಾಗದ ವ್ಯಾಪ್ತಿಯಲ್ಲಿದೆ.

ಬೆಳಗ್ಗೆ ಸುಮಾರು 9 ಗಂಟೆಗೆ ಪ್ಲಾಟ್‌ಫಾರ್ಮ್ ನಂಬರ್ 2ರಲ್ಲಿ ಈ ದುರ್ಘಟನೆ ಸಂಭವಿಸಿದೆ. ದಾನಾಪುರ ಆರ್‌ಪಿಎಫ್ ಕಮಾಂಡೆಂಟ್ ಉದಯ್ ಸಿಂಗ್ ಪವಾರ್ ಅವರ ಪ್ರಕಾರ, ಮೃತ ವ್ಯಕ್ತಿ ತಂಬಾಕು (ಖೈನಿ) ಜಗಿದು ಉಗುಳಲು ಪ್ಲಾಟ್‌ಫಾರ್ಮ್‌ನ ತುದಿಗೆ ಹೋಗಿದ್ದರು. ಇದೇ ವೇಳೆ ವೇಗವಾಗಿ ಬಂದ ಸೆಮಿ-ಹೈ-ಸ್ಪೀಡ್ ರೈಲು ಅವರಿಗೆ ಡಿಕ್ಕಿ ಹೊಡೆದಿದೆ.

ಕಣ್ಣು ಮುಚ್ಚಿ ತೆರೆಯುವುದರೊಳಗೆ, ವೇಗವಾಗಿ ಬಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅವರಿಗೆ ಗುದ್ದಿದೆ. ಇದರಿಂದ ಅವರ ತಲೆಗೆ ಗಂಭೀರ ಗಾಯಗಳಾಗಿ, ರೈಲಿನ ರಭಸಕ್ಕೆ ಅವರು ಪ್ಲಾಟ್‌ಫಾರ್ಮ್ ಮೇಲೆ ಬಿದ್ದಿದ್ದಾರೆ.

ಬಖ್ತಿಯಾರ್‌ಪುರ ಆರ್‌ಪಿಎಫ್ ಇನ್ಸ್‌ಪೆಕ್ಟರ್ ಜವಾಹರ್ ಲಾಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಘಟನೆ ನಡೆದ ತಕ್ಷಣ ಬಾರ್ಹ್ ಆರ್‌ಪಿಎಫ್ ಮತ್ತು ಜಿಆರ್‌ಪಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಗಾಯಾಳುವನ್ನು ಬಾರ್ಹ್ ಸದರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬಾರ್ಹ್‌ನಲ್ಲಿರುವ ಜಿಆರ್‌ಪಿ ಅಧಿಕಾರಿಗಳು ಅಸಹಜ ಸಾವು (UD) ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇಂತಹ ಘಟನೆಗಳನ್ನು ತಡೆಯಲು, ದಾನಾಪುರ ವಿಭಾಗದ ರೈಲ್ವೆ ಅಧಿಕಾರಿಗಳು ಮತ್ತು ಆರ್‌ಪಿಎಫ್, ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ರೈಲು ಬರುವಾಗ ಮತ್ತು ಹೋಗುವಾಗ ಪ್ಲಾಟ್‌ಫಾರ್ಮ್‌ನಿಂದ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಅವರು ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಗ್ನಿವೀರರಿಗೆ ಬಂಪರ್: ಶೇ. 20ರಷ್ಟು ಸರ್ಕಾರಿ ಉದ್ಯೋಗ ಮೀಸಲಾತಿಗೆ ರಾಜ್ಯಗಳಿಗೆ ಕೇಂದ್ರದ ಪತ್ರ!
ಏಪ್ರಿಲ್​ 1 ರಿಂದ ಕೆಲವು ಬ್ಯಾಂಕ್​ ವಹಿವಾಟು, ATM ಹಣ ವಿತ್​ಡ್ರಾನಲ್ಲಿ ಬದಲಾವಣೆ: ಇಲ್ಲಿದೆ ಡಿಟೇಲ್ಸ್​