
ನವದೆಹಲಿ(ಡಿ.03): ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ಒತ್ತಾಯಿಸಿ ವ್ಯಕ್ತಿಯೋರ್ವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರು ಅಡ್ಡಗಟ್ಟಿದ ಘಟನೆ ನಡೆದಿದೆ.
ಅಧಿವೇಶನದಲ್ಲಿ ಭಾಗವಹಿಸಲು ರಾಜನಾಥ್ ಸಿಂಗ್ ಸಂಸತ್ತಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಕಾರಿಗೆ ಅಡ್ಡ ಬಂದ ವ್ಯಕ್ತಿ, ತಾನು ಮೋದಿ ಅವರ ಅಭಿಮಾನಿಯಾಗಿದ್ದು ಅವರನ್ನು ಭೇಟಿ ಮಾಡಿಸುವಂತೆ ಮನವಿ ಮಾಡಿದ್ದಾನೆ.
ರಾಜನಾಥ್ ಕಾರಿಗೆ ಏಕಾಏಕಿ ವ್ಯಕ್ತಿ ಅಡ್ಡಬಂದ ಕಾರಣ ಗಾಬರಿಗೊಂಡ ಭದ್ರತಾ ಸಿಬ್ಬಂದಿ, ಕೂಡಲೇ ಕಾರಿನಿಂದ ಕೆಳಗಿಳಿದು ಆತನನ್ನು ವಶಕ್ಕೆ ಪಡೆದಿದ್ದಾರೆ.
ರಫೆಲ್ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!
ರಾಜನಾಥ್ ಸಿಂಗ್ ಕಾರಿಗೆ ಅಡ್ಡಬಂದ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ