ಬಿಜೆಪಿ ಅಧಿಕಾರಕ್ಕೆ ಬಂದರೆ...ಎಲ್ಲ ಸರಿಯಾಗುವುದು ಮನೋಜ್ ತಿವಾರಿ ಹೇಳಿದ್ದು ಕೇಳಿದರೆ..!

Published : Nov 12, 2019, 07:21 PM IST
ಬಿಜೆಪಿ ಅಧಿಕಾರಕ್ಕೆ ಬಂದರೆ...ಎಲ್ಲ ಸರಿಯಾಗುವುದು ಮನೋಜ್ ತಿವಾರಿ ಹೇಳಿದ್ದು ಕೇಳಿದರೆ..!

ಸಾರಾಂಶ

ವಾಯುಮಾಲಿನ್ಯದಿಂದ ತತ್ತರಿಸಿ ಹೋಗಿರುವ ರಾಜಧಾನಿ ದೆಹಲಿ ಜನತೆ| ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳು| 'ಬಿಜೆಪಿ ಅಧಿಕಾರಕ್ಕೆ ಬಂದರೆ ಎರಡು ವರ್ಷಗಳಲ್ಲಿ ವಾಯುಮಾಲಿನ್ಯಕ್ಕೆ ಇತಿಶ್ರೀ'| ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಭರವಸೆ| ಮುಂದಿನ ವರ್ಷ ದೆಹಲಿ ವಿಧಾನಸಭೆಗೆ ಚುನಾವಣೆ ಹಿನ್ನೆಲೆ| ಆಪ್ ಸರ್ಕಾರ ವಾಯುಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲ ಎಂದ ಮನೋಜ್ ತಿವಾರಿ|

ನವದೆಹಲಿ(ನ.12): ತೀವ್ರ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿ ನವದೆಹಲಿ ಜನತೆ ತತ್ತರಿಸಿ ಹೋಗಿದ್ದಾರೆ. ಆದರೆ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕಾದ ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ.

ಈ ಮಧ್ಯೆ ದೆಹಲಿಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಎರಡು ವರ್ಷಗಳಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಬರಲಿದೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಹೇಳಿದ್ದಾರೆ.

ಸಮ-ಬೆಸ ವಾಹನ ಸಂಚಾರ ದೆಹಲಿ ಮಾಲಿನ್ಯಕ್ಕೆ ಮದ್ದೇ?

ಮುಂದಿನ ವರ್ಷ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಕೇವಲ ಎರಡು ವರ್ಷಗಳಲ್ಲಿ ವಾಯುಮಾಲಿನ್ಯವನ್ನು ನಿಯಂತ್ರಣಕ್ಕೆ ತರಲಾಗುವುದು ಎಂದು ತಿವಾರಿ ಹೇಳಿದ್ದಾರೆ.

ಇದೇ ನ.18ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಕ್ರಮ ಕಟ್ಟಡ ಹಾಗೂ ಕಾಲೋನಿಗಳ ನಿಯುಂತ್ರಣಕ್ಕೆ ಹೊಸ ಕಾನೂನು ಜಾಆರಿಗೆ ಬರಲಿದೆ ಎಂದು ಮನೋಜ್ ತಿವಾರಿ ಸ್ಪಷ್ಟಪಡಿಸಿದ್ದಾರೆ.

ವಾಯುಮಾಲಿನ್ಯಕ್ಕೆ ಪಾಕ್, ಚೀನಾ ಕಾರಣ: ಕ್ಸಿ ಅವರನ್ನು ಮೋದಿ ಮುದ್ದಾಡಿದ್ದೇಕಣ್ಣ?

ಇದೇ ವೇಳೆ ಆಪ್ ಸರ್ಕಾರವನ್ನು ಟೀಕಿಸಿದ ಮನೋಜ್ ತಿವಾರಿ, ವಾಯುಮಾಲಿನ್ಯವನ್ನು ನಿಯಂತ್ರಿಸುವಲ್ಲಿ ಕೇಜ್ರಿವಾಲ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..