ಹರ್ಯಾಣದಲ್ಲಿ ಭೀಕರ ದುರಂತ, ನಕಲಿ ಮದ್ಯ ಸೇವಿಸಿ 19 ಮಂದಿ ಸಾವು

Published : Nov 12, 2023, 10:48 AM ISTUpdated : Nov 12, 2023, 10:51 AM IST
ಹರ್ಯಾಣದಲ್ಲಿ ಭೀಕರ ದುರಂತ, ನಕಲಿ ಮದ್ಯ ಸೇವಿಸಿ 19 ಮಂದಿ ಸಾವು

ಸಾರಾಂಶ

ಹರ್ಯಾಣದ 2 ಜಿಲ್ಲೆಗಳ 4 ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ ಶನಿವಾರ 19 ಮಂದಿ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಕಾಂಗ್ರೆಸ್‌ ಹಾಗೂ ಜೆಜೆಪಿಯ ನಾಯಕರ ಇಬ್ಬರು ಪುತ್ರರು ಸೇರಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಂಡೀಗಢ (ನ.12): ಹರ್ಯಾಣದ 2 ಜಿಲ್ಲೆಗಳ 4 ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ ಶನಿವಾರ 19 ಮಂದಿ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಕಾಂಗ್ರೆಸ್‌ ಹಾಗೂ ಜೆಜೆಪಿಯ (Jannayak Janata Party) ನಾಯಕರ ಇಬ್ಬರು ಪುತ್ರರು ಸೇರಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಮುನಾನಗರ ಮತ್ತು ಅಂಬಾಲಾ ಜಿಲ್ಲೆಗಳ ಮಾಂಡೇಬರಿ, ಪಂಜೇತೋ ಕಾ ಮಜ್ರಾ, ಫೂಸ್‌ಗಢ ಮತ್ತು ಸಾರನ್‌ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ.

ಘಟನೆ ಬಗ್ಗೆ ಪ್ರತಿಪಕ್ಷಗಳು ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಈ ಹಿಂದಿನ ನಕಲಿ ಮದ್ಯ ದುರಂತದಿಂದ ಸರ್ಕಾರ ಪಾಠ ಕಲಿತಿಲ್ಲ ಎಂದು ಮೂದಲಿಸಿವೆ. ಬಂಧಿತರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Bengaluru: ಕನ್ನಡ ಹಾಡು ಹಾಕದ್ದಕ್ಕೇ ಯುವಕನ ಕೊಲೆ!

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಗ್ರಾಮಗಳಲ್ಲಿ ಶೋಧ ನಡೆಸಿದ್ದಾರೆ.ಅಜ್ಞಾತ ಕಾರ್ಖಾನೆಯಿಂದ ತಯಾರಿಸಿ ಬಂಧಿತರಿಗೆ ಮಾರಾಟ ಮಾಡಿದ್ದ ಸುಮಾರು 200 ನಕಲಿ ಮದ್ಯಗಳ ಪೆಟ್ಟಿಗೆಗಳು, ಮದ್ಯ ತಯಾರಿಸಲು ಶೇಖರಿಸಿಟ್ಟಿದ್ದ ಸಾಮಗ್ರಿಗಳನ್ನು ಅಂಬಾಲಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ತನಿಖೆ ಕೈಗೊಂಡಿದ್ದಾರೆ.

ಗ್ರಾಮಸ್ಥರಿಗೆ ಈ ಬಗ್ಗೆ ಗೊತ್ತಿದ್ದರೂ ಹೆಸರು ಹೇಳಲು ಭಯಪಡುತ್ತಿದ್ದಾರೆ ಎಂದು ವರದಿ ತಿಳಿಸಿದೆ. ನನಗೆ ಭಯವಾಗುತ್ತಿದೆ. ದನಿ ಎತ್ತಿದರೆ ನಮ್ಮ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ಗ್ರಾಮಸ್ಥನೊಬ್ಬ ಹೇಳಿಕೊಂಡಿದ್ದಾನೆ. ಜಿಲ್ಲೆಯಲ್ಲಿ ಅಕ್ರಮವಾಗಿ ತಯಾರಿಸಿದ ಶಂಕಿತ ನಕಲಿ ಮದ್ಯವನ್ನು ಸೇವಿಸಿ ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರು ಗುರುವಾರ ಅಂಬಾಲಾದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ, 15 ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ

ಅಂಬಾಲ ಪೊಲೀಸರು ಕಾರ್ಖಾನೆಯಲ್ಲಿ ತಯಾರಿಸಿದ 200 ಕ್ರೇಟ್ ನಕಲಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. 14 ಖಾಲಿ ಡ್ರಮ್‌ಗಳು ಮತ್ತು ಅಕ್ರಮ ಮದ್ಯ ತಯಾರಿಸಲು ಬಳಸಿದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ಯಮುನಾನಗರ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ