ಅಯೋಧ್ಯೆ ಗರ್ಭಗುಡಿ ಪ್ರವೇಶಿಸಿ ರಾಮಲಲ್ಲಾನ ದರ್ಶನ ಪಡೆದು ತೆರಳಿದ ವಾನರ

Published : Jan 24, 2024, 09:03 AM ISTUpdated : Jan 24, 2024, 09:36 AM IST
ಅಯೋಧ್ಯೆ  ಗರ್ಭಗುಡಿ ಪ್ರವೇಶಿಸಿ ರಾಮಲಲ್ಲಾನ ದರ್ಶನ ಪಡೆದು ತೆರಳಿದ ವಾನರ

ಸಾರಾಂಶ

 ರಾಮ ಮಂದಿರದ ಗರ್ಭಗುಡಿಗೆ ಮಂಗಳವಾರ ಸಂಜೆ 5:50ರ ವೇಳೆಗೆ ಕೋತಿಯೊಂದು ಪ್ರವೇಶಿಸಿದ ಪ್ರಸಂಗ ನಡೆದಿದೆ. ಇದನ್ನು ಕಂಡ ಜನರು 'ರಾಮನನ್ನು ಭೇಟಿ ಮಾಡಲು ಹನುಮ ಬಂದಿದ್ದಾನೆ' ಎಂದು ವರ್ಣಿಸಿದ್ದಾರೆ. 

ಅಯೋಧ್ಯೆ: ರಾಮ ಮಂದಿರದ ಗರ್ಭಗುಡಿಗೆ ಮಂಗಳವಾರ ಸಂಜೆ 5:50ರ ವೇಳೆಗೆ ಕೋತಿಯೊಂದು ಪ್ರವೇಶಿಸಿದ ಪ್ರಸಂಗ ನಡೆದಿದೆ. ಇದನ್ನು ಕಂಡ ಜನರು 'ರಾಮನನ್ನು ಭೇಟಿ ಮಾಡಲು ಹನುಮ ಬಂದಿದ್ದಾನೆ' ಎಂದು ವರ್ಣಿಸಿದ್ದಾರೆ. ದೇಗುಲದ ದಕ್ಷಿಣ ದ್ವಾರದಿಂದ ಪ್ರವೇಶಿಸಿದ ಕೋತಿ, ನೇರವಾಗಿ ಗರ್ಭ ಗುಡಿಗೆ ಲಗ್ಗೆ ಇಟ್ಟಿತು. ಇದನ್ನು ಕಂಡ ಸಿಬ್ಬಂದಿ, ಉತ್ಸವ ಮೂರ್ತಿಯನ್ನು ಬೀಳಿಸಿದರೆ ಎಂಬ ಆತಂಕದಿಂದ ಗರ್ಭಗುಡಿ ಕಡೆಗೆ ಬಂದರು. ಇದನ್ನು ಕಂಡ ವಾನರ, ನಿಧಾನವಾಗಿ ಪೂರ್ವ ದ್ವಾರದ ಕಡೆಗೆ ತೆರಳಿ ಯಾವುದಕ್ಕೂ, ಯಾರಿಗೂ ಹಾನಿ ಮಾಡದೆ ಹೊರ ಹೋಗಿದೆ ಎಂದು ಸ್ವತಃ ಮಂದಿರ ಟ್ರಸ್ಟ್ ಮಾಹಿತಿ ನೀಡಿದೆ.

ಪ್ರತಿಮೆ ನಿರ್ಮಾಣಕ್ಕೆ ರಾಮನೇ ನನ್ನನ್ನು ಆಯ್ಕೆ ಮಾಡಿದ
ಅಯೋಧ್ಯೆ: 'ರಾಮನೇ ನನ್ನ ರಕ್ಷಕ. ತನ್ನ ಮೂರ್ತಿಯನ್ನು ರೂಪಿಸಿಕೊಳ್ಳಲು ಆತನೇ ನನ್ನನ್ನು ಆಯ್ಕೆ ಮಾಡಿದ' ಎಂದು ಅಯೋಧ್ಯೆ ರಾಮ ಪ್ರತಿಮೆ ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿ ರಾಜ್ ಹರ್ಷಿಸಿದ್ದಾರೆ. ಮಂಗಳವಾರ ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, 'ರಾಮನು ನನ್ನನ್ನು ಮತ್ತು ನನ್ನ ಕುಟುಂಬ ವನ್ನು ಎಲ್ಲಾ ಕೆಟ್ಟ ಸಮಯಗಳಿಂದ ರಕ್ಷಿಸುತ್ತಿದ್ದಾನೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಆತನೇ ನನ್ನನ್ನು ಈ ಶುಭ ಕಾರ್ಯಕ್ಕೆ ಆಯ್ಕೆ ಮಾಡಿದ್ದಾರೆ ಎಂದು ನಾನು ಬಲವಾಗಿ ನಂಬುತ್ತೇನೆ' ಎಂದರು.

ವಿಜಯಪುರ ರಾಮೋತ್ಸವ, ಆರಿದ್ದ ದೀಪ ಮತ್ತೆ ಉರಿದು ಅಚ್ಚರಿ, ರಾಮನ ಪೂಜೆ ವೇಳೆ ಕೋತಿ ಪ್ರತ್ಯಕ್ಷ!

'ವಿಗ್ರಹವನ್ನು ಕೆತ್ತಲು ನಾನು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ. ಅವಿಶ್ರಾಂತವಾಗಿ ಕೆಲಸ ಮಾಡುತ್ತಿದ್ದೆ. ಆದರೆ ಇದು ವ್ಯರ್ಥವಲ್ಲ. ಅವು ಅತ್ಯಂತ ಮೌಲ್ಯಯು ತಕ್ಷಣಗಳು. ನಾನು ಭೂಮಿಯ ಮೇಲಿನ ಅತ್ಯಂತ ಅದೃಷ್ಟಶಾಲಿ ವ್ಯಕ್ತಿ ಮತ್ತು ಇದು ನನ್ನ ಜೀವನದ ಅತ್ಯುತ್ತಮ ದಿನ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು. 'ನಾನು ನನ್ನ ತಂದೆಯಿಂದ ಶಿಲ್ಪಕಲೆಯನ್ನು ಕಲಿತಿದ್ದೇನೆ. ಅವರು ಇಂದು ಇಲ್ಲಿ ಇದ್ದಿದ್ದರೆ ನನ್ನ ವಿಗ್ರಹವನ್ನು ನೋಡಿ ತುಂಬಾ ಹೆಮ್ಮೆ ಪಡುತ್ತಿದ್ದರು' ಎಂದು ಅವರು ಹೇಳಿದರು.

ರಾಜಸ್ಥಾನ ಶಿಲ್ಪಿ ಕೆತ್ತಿದ ರಾಮನ ಫೋಟೋ ಲೀಕ್
ಅಯೋಧ್ಯೆ: ರಾಮಮಂದಿರದಲ್ಲಿ ಪ್ರತಿಷ್ಠಾಪಿಸುವುದಕ್ಕಾಗಿ ರಾಜಸ್ಥಾನದ ಶಿಲ್ಪಿ ಸತ್ಯನಾರಾಯಣ ಪಾಂಡೆ ಕೆತ್ತಿದ್ದ ಬಿಳಿಯ ಶಿಲೆ ರಾಮಲಲ್ಲಾ ಮೂರ್ತಿಯ ಫೋಟೋ ಸೋರಿಕೆಯಾಗಿದೆ. ಬಿಳಿಯ ಶಿಲೆಯಲ್ಲಿ ಕೆತ್ತಲಾಗಿರುವ ಬಾಲಕ ರಾಮ ಕೈಯಲ್ಲಿ ಚಿನ್ನದ ಬಿಲ್ಲು ಮತ್ತು ಬಾಣಗಳನ್ನು ಹಿಡಿದುಕೊಂಡಿದ್ದು, ರಾಮ ಮೂರ್ತಿಯ ಸುತ್ತಲೂ ಇರುವ ಕಮಾನಿನಲ್ಲಿ ವಿಷ್ಣುವಿನ ದಶಾವತಾರಗಳನ್ನು ಕೆತ್ತಲಾಗಿದೆ. ಮೇಲ್ಬಾಗದಲ್ಲಿ ಸೂರ್ಯ, ಗದೆ ಮತ್ತು ಕಮಲಗಳನ್ನು ಕೆತ್ತಲಾಗಿದೆ. ಇದರಲ್ಲೂ ಸಹ ಬಾಲರಾಮ ಕಮಲದ ಮೇಲೆ ನಿಂತಿದ್ದು, ಎರಡು ಬದಿಗಳಲ್ಲಿ ಆಂಜನೇಯ ಮತ್ತು ಗರುಡನ ವಿಗ್ರಹಗಳನ್ನು ಕೆತ್ತಲಾಗಿದೆ.

ಎಂದೂ ಕಾಣದ ಕೋತಿರಾಯ ಆಂಜಯೇಯ ವಿಗ್ರಹ ಪ್ರತಿಷ್ಠಾಪನೆ ವೇಳೆ ಪ್ರತ್ಯಕ್ಷ! ತಣಿಗೆರೆ ಗ್ರಾಮದಲ್ಲಿ ಅಚ್ಚರಿ! 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?