ಮಾಸ್ಕ್ ಕಡ್ಡಾಯ, ಶಾಲೆಗಳಿಗೆ ರಜೆ; ಕೆರಳ ನಿಫಾ ವೈರಸ್‌ನಿಂದ ಮಾರ್ಗಸೂಚಿ ಪ್ರಕಟ!

Published : Sep 16, 2024, 09:23 PM IST
ಮಾಸ್ಕ್ ಕಡ್ಡಾಯ, ಶಾಲೆಗಳಿಗೆ ರಜೆ; ಕೆರಳ ನಿಫಾ ವೈರಸ್‌ನಿಂದ ಮಾರ್ಗಸೂಚಿ ಪ್ರಕಟ!

ಸಾರಾಂಶ

ಕೇರಳದಲ್ಲಿ ನಿಫಾ ವೈರಸ್‌ಗೆ ಯುವಕ ಬಲಿಯಾದ ಬೆನ್ನಲ್ಲೇ ಮಾರ್ಗಸೂಚಿ ಪ್ರಕಟಗೊಂಡಿದೆ. ಕೆಲ ಜಿಲ್ಲೆಯಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಜೊತೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.   

ತಿರುವನಂತಪುರಂ(ಸೆ.16) ಕೇರಳದಲ್ಲಿ ನಿಫಾ ವೈರಸ್ ಹರಡು ಭೀತಿ ಎದುರಾಗಿದೆ. ಎರಡನೇ ನಿಫಾ ವೈರಸ್ ಸಾವು ಪ್ರಕರಣ ವರದಿಯಾದ ಬೆನ್ನಲ್ಲೇ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪ್ರಮುಖವಾಗಿ ಮಲಪ್ಪುರಂ ಜಿಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಜಿಲ್ಲೆಯ ಹಲವು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ ಯುವಕನ ನಿಫಾ ವೈರಸ್‌ಗೆ ಬಲಿಯಾಗಿದ್ದಾನೆ. ನಿಫಾ ವೈರಸ್‌ನಿಂದ 2 ಸಾವು ಖಚಿತವಾಗುತ್ತಿದ್ದಂತೆ ಕೆರಳ ಸರ್ಕಾರ ಅಲರ್ಟ್ ಆಗಿದೆ.

ಮಲಪ್ಪುರಂನ ಹಲವು ಗ್ರಾಮಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯಿಂದ 7 ಗಂಟೆ ವರೆಗೆ ಸಾರ್ವಜನಿಕರಿಗೆ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಸಾರ್ವಜನಿಕ ಪ್ರದೇಶಗಳಲ್ಲಿ ಭೇಟಿ ಸೇರಿದಂತೆ ಜನದಟ್ಟಣೆ ನಿಷೇಧಿಸಿದೆ. ಕೆಲ ಅಗತ್ಯ ವಸ್ತುಗಳಾದ ಹಾಲು ಸೇರಿದಂತೆ ಇತರ ವಸ್ತುಗಳ ಸೇವೆ ಬೆಳಗ್ಗೆ 6 ಗಂಟೆಯಿಂದ ಆರಂಭಿಸಲು ಅವಕಾಶವಿದೆ. 

ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ 24 ವರ್ಷದ ಯುವಕ ನಿಫಾ ವೈರಸ್‌ಗೆ ಬಲಿ, ಎಲ್ಲೆಡೆ ಅಲರ್ಟ್!

ಜಿಲ್ಲೆಯ ಸಿನಿಮಾ ಥಿಯೇಟರ್‌ಗಳನ್ನು ಮುಚ್ಚಲು ಸೂಚಿಸಲಾಗಿದೆ. ನಿಫಾ ವೈರಸ್ ಪತ್ತೆಯಾದ ಸುತ್ತ ಮುತ್ತಲಿನ ತಾಲೂಕು ಹಾಗೂ ಗ್ರಾಮಗಳಲ್ಲಿ ಶಾಲಾ ಕಾಲೇಜು, ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಇಡೀ ಜಿಲ್ಲೆಯಲ್ಲಿ ಶಾಲಾ ಕಾಲೇಜಿನಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಇನ್ನು ಸಾರ್ವಜನಿಕ ಪ್ರದೇಶದಲ್ಲೂ ಮಾಸ್ಕ ಕಡ್ಡಾಯ ಮಾಡಲಾಗಿದೆ. ಪ್ರಾಣಿ ಪಕ್ಷಿಗಳು ಕಚ್ಚಿರುವ ಯಾವುದೇ ಆಹಾರ ಸೇವಿಸದಂತೆ ಸೂಚಿಸಲಾಗಿದೆ. 

ಕೇರಳದ ಮಲಪ್ಪುರಂ ಜಿಲ್ಲೆಯ ನೀಲಂಬೂರು ತಾಲೂಕಿನ ವಾಂಡೂರ್‌ನವನಾದ 23 ವರ್ಷದ ವಿದ್ಯಾರ್ಥಿ ಜಾಂಡೀಸ್ ರೀತಿಯ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತವರಿಗೆ ಮರಳಿದ್ದ. ಒಂದು ವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಸೆ.9ರಂದು ಆತ ಕೊನೆಯುಸಿರೆಳೆದಿದ್ದ. ಕೋಳಿಕ್ಕೋಡ್‌ನಲ್ಲಿ ಈತನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ನಿಪಾ ವೈರಾಣು ಸೋಂಕಿನ ಲಕ್ಷಣ ಕಂಡುಬಂದಿತ್ತು. ಹೀಗಾಗಿ ಉನ್ನತ ಪರಿಶೀಲನೆಗಾಗಿ ಆ ಮಾದರಿಯನ್ನು ಪುಣೆಯ ವೈರಾಣು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ವೇಳೆ ನಿಫಾ ವೈರಸ್ ದೃಢಪಟ್ಟಿತ್ತು. ಇದು ನಿಫಾ ವೈರಸ್‌ಗೆ ಈ ವರ್ಷ ಬಲಿಯಾದ 2ನೇ ಪ್ರಕರಣವಾಗಿದೆ.

ಪ್ರಾಣಿಗಳಿಂದ ಮಾನವರಿಗೆ ಹಬ್ಬುವ ವೈರಸ್‌ ಇದು. ಸೋಂಕು ಹೊಂದಿದ ಬಾವಲಿ, ಹಂದಿ ಅಥವಾ ಹಣ್ಣು ಹುಳಗಳಿಂದ ಈ ರೋಗ ಮಾನವರ ಸಂಪರ್ಕಕ್ಕೆ ಬರಬಹುದು. ಸೋಂಕಿತ ವ್ಯಕ್ತಿಯ ಸಂಪರ್ಕದಿಂದಲೂ ಕಾಣಿಸಿಕೊಳ್ಳುತ್ತದೆ. 1998ರಲ್ಲಿ ಮೊದಲ ಬಾರಿಗೆ ಮಲೇಷ್ಯಾದಲ್ಲಿ ಕಂಡುಬಂದಿತ್ತು.

ನಿಫಾ ವೈರಸ್ ಖಚಿತಗೊಂಡ ಬೆನ್ನಲ್ಲೇ ಕೇರಳದ 14ರ ಬಾಲಕ ಸಾವು, ಕರ್ನಾಟಕದಲ್ಲಿ ಅಲರ್ಟ್!
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!