ಪುಣೆಯ ಸ್ಯಾನಿಟೈಸರ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಸಾಂತ್ವನ ಜೊತೆಗೆ ಪರಿಹಾರ ಘೋಷಿಸಿದ ಮೋದಿ

Published : Jun 07, 2021, 07:36 PM ISTUpdated : Jun 07, 2021, 08:50 PM IST
ಪುಣೆಯ ಸ್ಯಾನಿಟೈಸರ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಸಾಂತ್ವನ ಜೊತೆಗೆ ಪರಿಹಾರ ಘೋಷಿಸಿದ ಮೋದಿ

ಸಾರಾಂಶ

ಹೊತ್ತಿ ಉರಿದ ಸ್ಯಾನಿಟೈಸರ್ ಫ್ಯಾಕ್ಟರಿ ಘಟಕದೊಳಗೆ ಸಿಲುಕಿಗ ಹಲವು ಸಿಬ್ಬಂದಿಗಳು  7 ಮಂದಿ ಸಾವು, 20 ಮಂದಿ ರಕ್ಷಣೆ, 10 ಮಂದಿ ಕಣ್ಮೆರೆ

ಪುಣೆ(ಜೂ.07): ಕೊರೋನಾ ವಕ್ಕರಿಸಿದ ಬಳಿಕ ಸ್ಯಾನಿಟೈಸರ್ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಹಲವು ಕಂಪನಿಗಳು ಸ್ಯಾನಿಟೈಸರ್ ಉತ್ಪಾದನೆ ಮಾಡುತ್ತಿದೆ. ಹೀಗೆ ಸ್ಯಾನಿಟೈಸರ್ ಉತ್ಪಾದನೆ ಮಾಡುತ್ತಿದ್ದ ಪುಣೆಯ ಕೆಮಿಕಲ್ ಫ್ಯಾಕ್ಟರಿ ದಿಢೀರ್ ಹೊತ್ತಿ ಉರಿದಿದೆ.  ಸದ್ಯದ ಮಾಹಿತಿ ಪ್ರಕಾರ 7 ಮಂದಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ.

ಕೊರೋನಾ ಮಾರ್ಗಸೂಚಿ ಪಾಲನೆ ವೇಳೆ ಎಚ್ಚರ ಮರೆತ ಚಾಲಕ; ಹೊತ್ತಿ ಉರಿದ ಕಾರು!.

ಬೆಂಕಿ ಕಾಣಿಸಿಕೊಂಡ ತಕ್ಷಣವೆ ಕೆಮಿಕಲ್ ಹೊತ್ತಿ ಉರಿದಿದೆ. ಪರಿಣಾಣ ಇಡಿ ಫ್ಯಾಕ್ಟರಿಗೆ ಆವರಿಸಿಕೊಂಡಿದೆ. ಕೆಲಸ ಮಾಡುತ್ತಿದ್ದ  ಸಿಬ್ಬಂದಿಗಳಿಗೆ ಹೊರಗೆ ಓಡಲು ಸಾಧ್ಯವಾಗದೆ ಸಿಲುಕಿಕೊಂಡರು. 20 ಮಂದಿಯನ್ನು ರಕ್ಷಿಸಲಾಗಿದೆ. ಇನ್ನು 10 ಮಂದಿ ಕಣ್ಮರೆಯಾಗಿದ್ದಾರೆ.

 

ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಪೊಲೀಸರು ಠಿಕಾಂ ಹೂಡಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿದುರಂತಕ್ಕೆ ತೀವ್ರ ಬೇಸರ ವ್ಯಕ್ತಪಡಿಸಸಿದ ಪ್ರಧಾನಿ ಮೋದಿ, ಮಡಿದವರ ಕಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ಸಾವಿರ ರೂಪಾಯಿ ಘೋಷಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!