
ಕೇರಳ (ಏ.03): ದೇಶ ವಿರೋಧಿ ಕೃತ್ಯಗಳ ಹಿನ್ನೆಲೆಯಲ್ಲಿ ನಿಷೇಧಿಸಲ್ಪಟ್ಟಿರುವ ಪಾಪ್ಯುಲರ್ ನೇತೃತ್ವದ ಯುಡಿಎಫ್ ಕೂಟ ಫ್ರೆಂಟ್ ಆಫ್ ಇಂಡಿಯಾ (ಪಿಎಫ್ಐ)ದ ರಾಜಕೀಯ ಮುಖವಾಣಿಯಾದ ಎಸ್ಡಿಪಿಐ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿ ಘೋಷಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಕೇರಳ ಎಸ್ಡಿಪಿಐ ಅಧ್ಯಕ್ಷ ಮೂವತ್ತುಪುಳ ಅಶ್ರಫ್, 'ಧರ್ಮದ ಆಧಾರದಲ್ಲಿ ಜನರಿಗೆ ಪೌರತ್ವ ನೀಡಲು ಬಿಜೆಪಿ ಕಾನೂನು ರೂಪಿಸುತ್ತಿದೆ.
ನಮ್ಮ ಸಂವಿಧಾನವನ್ನೇ ಬಿಜೆಪಿ ಪ್ರಶ್ನಿಸುತ್ತಿದೆ. ಹೀಗಾಗಿ ಆ ಪಕ್ಷದ ವಿರುದ್ದ ಹೋರಾಡುತ್ತಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಟ ಬೆಂಬಲಿಸಲು ನಿರ್ಧರಿಸಿದ್ದೇವೆ' ಎಂದಿದ್ದಾರೆ. ಈ ಬೆಂಬಲವನ್ನು ಕಾಂಗ್ರೆಸ್ ಕೂಡಾ ಸ್ವಾಗತಿಸಿದೆ. ಈ ನಡುವೆ ಎಸ್ಡಿಪಿಐ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿರುವ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್, ಡಿಪಿಐ ಮತ್ತು ಪಿಎಫ್ಐ ದೇಶ ಒಡೆಯಲು ಪ್ರಯತ್ನಿಸಿದ್ದವು. ಹಿಂದೂ, ಕ್ರೈಸ್ತರ ಹತ್ಯೆ, ದೇವಾಲಯ, ಚರ್ಚು ನಾಶ ಇವುಗಳ ಗುರಿ. ಇಂಥ ಶಕ್ತಿಗಳು ಕಾಂಗ್ರೆಸ್ ಬೆಂಬಲ ಘೋಷಿಸಿವೆ. ಇದು ಆಘಾತಕಾರಿ ಸಂಗತಿ.
ಆರ್ಥಿಕ ಅಶಿಸ್ತೇ ಈ ಪರಿಸ್ಥಿತಿಗೆ ಕಾರಣ: ಕೇರಳಕ್ಕೆ ಸುಪ್ರೀಂಕೋರ್ಟ್ ತಪರಾಕಿ
ಈ ಬಗ್ಗೆ ರಾಹುಲ್ ನಿಲುವು ಏನು ಏನೆಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ ಸಿಪಿಎಂ ಕೂಡಾ ಈ ಬೆಳವಣಿಗೆ ಬಗ್ಗೆ ರಾಜ್ಯದ ಜನತೆ ಚುನಾವ ಣೆಯಲ್ಲಿ ಯುಡಿಎಫ್ ಮೈತ್ರಿಕೂಟಕ್ಕೆ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ವೇಣುಗೋಪಾಲ್ 'ನಾವು ಎಸ್ಡಿಪಿಐನಿಂದ ಸಹಾಯ ಕೇಳಿಲ್ಲ. ಚುನಾವಣೆಯಲ್ಲಿ ಪ್ರತಿಯೊಬ್ಬರು ಮತ ಕೇಳುವುದು ಗೆಲುವಿಗಾಗಿ, ಆದರೆ ಈ ಹಂತದಲ್ಲಿ ಪಕ್ಷದ ರಾಜಕೀಯ ಸಿದ್ಧಾಂತಗಳ ಜೊತೆಗೆ ರಾಜಿ ಮಾಡಿಕೊಳ್ಳುವುದಿಲ್ಲ' ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ