
ಭೋಪಾಲ್(ಸೆ.06): ವೈದ್ಯಕೀಯ ವಿದ್ಯಾರ್ಥಿಗಳ ಮೊದಲ ವರ್ಷದ ಪಠ್ಯದ ಭಾಗವಾಗಿ ಹಿಂದುತ್ವದ ಪ್ರತಿಪಾದಕರಾದ ಆರ್ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಡಗೇವಾರ್, ಜನಸಂಘದ ನಾಯಕ ದೀನ್ ದಯಾಳ್ ಉಪಾಧ್ಯಾಯ, ಸ್ವಾಮಿ ವಿವೇಕಾನಂದ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆ, ಮೌಲ್ಯ, ತತ್ವಗಳನ್ನು ಅಳವಡಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮತ್ತು ವೈದ್ಯಕೀಯ ನೈತಿಕತೆಯನ್ನು ಬಿತ್ತಲು ಈ ನಿರ್ಧಾರ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಉನ್ನತ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್, ‘ನೈತಿಕ ಶಿಕ್ಷಣ ವಿದ್ಯಾರ್ಥಿಗಳ ಮೊದಲ ವರ್ಷದ ಶಿಕ್ಷಣದ ಭಾಗವಾಗಬೇಕೆಂದು ಭಾರತೀಯ ವೈದ್ಯಕೀಯ ಮಂಡಳಿ ಹೇಳಿತ್ತು. ಈ ಹಿನ್ನೆಲೆಯಲ್ಲಿ ಕೆ.ಬಿ. ಹೆಡಗೇವಾರ್, ದೀನ್ ದಯಾಳ್ ಉಪಾಧ್ಯಾಯ, ಸ್ವಾಮಿ ವಿವೇಕಾನಂದ ಮತ್ತು ಅಂಬೇಡ್ಕರ್ ಅವರ ತತ್ವ, ನೈತಿಕತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಗುವುದು.
ಇದರ ಜೊತೆಗೆ ಮಹರ್ಷಿ ಚಕ್ರ ಮತ್ತು ಶಸ್ತ್ರಚಿಕಿತ್ಸೆಯ ಪಿತಾಮಹ ಎಂದೇ ಬಣ್ಣಿತ ಸುಶ್ರುತನ ಕುರಿತ ಅಂಶಗಳನ್ನೂ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ