
ನೈನಿತಾಲ್(ಜು.25): ದೇಶದಲ್ಲಿ ಶೇ.70ರಷ್ಟುಜನಸಂಖ್ಯೆ ಮಾಂಸಾಹಾರ ಸೇವನೆ ಮಾಡುವುದರಿಂದ, ಮಾಂಸ ಮಾರಾಟ ನಿಷೇಧವು ಜನರ ಮೂಲಭೂತ ಹಕ್ಕುಗಳ ಕುರಿತಾದ ಕಳವಳಕ್ಕೆ ಸಂಬಂಧಿಸಿದ ವಿಷಯವಾಗಿದೆ ಎಂದು ಉತ್ತರಾಖಂಡ ಹೈಕೋಟ್ ಅಭಿಪ್ರಾಯಪಟ್ಟಿದೆ.
ಹರಿದ್ವಾರದಲ್ಲಿ ಖಸಾಯಿಖಾನೆಗಳನ್ನು ನಿಷೆಧಿಸಬೇಕು ಎಂದು ಸಲ್ಲಿಸಲಾದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಉತ್ತರಾಖಂಡ ಹೈಕೋರ್ಟ್, ‘ಮಾಂಸ ಮಾರಾಟ ನಿಷೇಧ ಅಲ್ಪಸಂಖ್ಯಾತರು ಮತ್ತು ಬಹುಸಂಖ್ಯಾತರಿಗೆ ಸಂಬಂಧಿತ ವಿಷಯ ಅಲ್ಲ. ಇಲ್ಲಿ ವಿಷಯ ಬಹಳ ಸರಳ. ಭಾರತೀಯ ನಾಗರಿಕರ ಮೂಲಭೂತ ಹಕ್ಕಿಗೆ ಸಂಬಂಧಿಸಿದ್ದಾಗಿದೆ’ ಎಂದು ತಿಳಿಸಿದೆ.
ಇದೇ ವೇಳೆ ಭಾರತೀಯರ ಆಹಾರ ಪದ್ಧತಿಗೆ ಸಂಬಂಧಿಸಿದಂತೆ 2018 ಮತ್ತು 2019ರಲ್ಲಿ ಪ್ರಕಟವಾದ ಸಮೀಕ್ಷೆಗಳನ್ನು ಉಲ್ಲೇಖಿಸಿದ ಹೈಕೋರ್ಟ್, ದತ್ತಾಂಶಗಳ ಪ್ರಕಾರ ಉತ್ತರಾಖಂಡದಲ್ಲಿ ಒಟ್ಟು ಜನಸಂಖ್ಯೆಯ ಪೈಕಿ ಶೇ.72ರಷ್ಟು ಜನರು ಮಾಂಸಾಹಾರಿಗಳಾಗಿದ್ದಾರೆ. ಭಾರತದಲ್ಲಿ ಶೇ.70ರಷ್ಟುಮಂದಿ ಮಾಂಸ ಸೇವನೆ ಮಾಡುತ್ತಾರೆ ಎಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ