
ಚೆನ್ನೈ/ನವದೆಹಲಿ(ಮೇ.29): ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿಯುತ್ತಿದ್ದಂತೆಯೇ ಮೇ 30ರಿಂದ ಜೂ.1ರವರೆಗೆ ಕನ್ಯಾಕುಮಾರಿಯಲ್ಲಿ ತಂಗಲಿದ್ದು, ಅಲ್ಲಿ 3 ದಿನ ಧ್ಯಾನ ನಡೆಸಲಿದ್ದಾರೆ.
ಕನ್ಯಾಕುಮಾರಿಯಲ್ಲಿ ಈ ಹಿಂದೆ ಧ್ಯಾನಾಸಕ್ತರಾಗಿದ್ದ ಸ್ವಾಮಿ ವಿವೇಕಾನಂದರು ತಮ್ಮ ದಿವ್ಯದೃಷ್ಟಿಯಿಂದ ಭಾರತ ಮಾತೆಯನ್ನು ಕಂಡರು ಎಂದು ಹೇಳಲಾದ ವಿವೇಕಾನಂದ ರಾಕ್ ಮೆಮೋರಿಯಲ್ನ ಧ್ಯಾನ ಮಂಟಪದಲ್ಲಿ ಮೋದಿ ಧ್ಯಾನಾಸಕ್ತರಾಗಲಿದ್ದಾರೆ. ಮೇ 30ರ ಸಂಜೆಯಿಂದ ಜೂ.1ರ ಸಂಜೆಯವರೆಗೆ ಅವರು ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಇಂಡಿಯಾ ಕೂಟಕ್ಕೆ ಬಹುಮತ ಬರುವ ಸಾಧ್ಯತೆ ಇದೆ: ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ
ಜೂ.1ರ ಸಂಜೆ ಅವರು ದಿಲ್ಲಿಗೆ ನಿರ್ಗಮಿಸಲಿದ್ದಾರೆ. ಆ ಹೊತ್ತಿಗೆ ಮೋದಿ ಅವರ ತವರು ಕ್ಷೇತ್ರ ವಾರಾಣಸಿ ಸೇರಿದಂತೆ ದೇಶದೆಲ್ಲೆಡೆ ಕೊನೆಯ ಚರಣದ ಮತದಾನವೂ ಮುಗಿದಿರುತ್ತದೆ.
ಈ ಹಿಂದೆ ಮೋದಿ 2019ರ ಲೋಕಸಭೆ ಚುನಾವಣೆ ಮುಗಿದ ಬಳಿಕ ಕೇದಾರನಾಥಕ್ಕೆ ತೆರಳಿ ಅಲ್ಲಿನ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಈ ಸಲ ವಿವೇಕಾನಂದರ ತತ್ವವನ್ನು ದೇಶಕ್ಕೆ ಸಾರಬೇಕು ಎಂಬ ಉದ್ದೇಶದಿಂದ ಕನ್ಯಾಕುಮಾರಿಯನ್ನು ಮೋದಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
3ನೇ ಮಗು ಹುಟ್ಟಿದ್ದಕ್ಕೆ ಇಬ್ಬರು ಬಿಜೆಪಿ ಕಾರ್ಪರೇಟರ್ಗಳು ಅನರ್ಹ: ಮೋದಿ ರೂಪಿಸಿದ್ದ ಕಾನೂನು..!
ಈ ಹಿಂದೆ ಇಡೀ ಭಾರತ ಸುತ್ತಿ ವಿವೇಕಾನಂದರು ಇಲ್ಲಿ 3 ದಿನ ಧ್ಯಾನ ಮಾಡಿದ್ದರು. ಇದೇ ಸ್ಥಳದಲ್ಲಿ ಶಿವನಿಗಾಗಿ ಪಾರ್ವತಿ ಧ್ಯಾನ ಮಾಡಿದ್ದಳು ಎಂದು ಧಾರ್ಮಿಕ ಪುಸ್ತಕಗಳು ಹೇಳುತ್ತವೆ.
ಮೋದಿ ಅವರು ಚುನಾವಣೆ ಘೋಷಣೆಗೂ ಮುನ್ನವೇ ಭಾರತ ಪರ್ಯಟನೆ ಆರಂಭಿಸಿ ನೂರಾರು ಬಿಜೆಪಿ ರ್ಯಾಲಿಗಳನ್ನು ನಡೆಸಿದ್ದಾರೆ ಹಾಗೂ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳನ್ನು ಮನಸೋ ಇಚ್ಛೆ ಝಾಡಿಸಿದ್ದಾರೆ.
ಈ ನಡುವೆ, ಕೆಲವು ಬಿಜೆಪಿಗರು, ‘ಮೋದಿ ಕನ್ಯಾಕುಮಾರಿ ಭೇಟಿಯು ತಮಿಳುನಾಡಿನ ಬಗ್ಗೆ ಹೊಂದಿರುವ ಪ್ರೇಮದ ಸಂಕೇತ’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ