ಮಹಾಕುಂಭ ಮೇಳ ಟೀಕಿಸುವುದು ಗುಲಾಮಗಿರಿಯ ಮನಸ್ಥಿತಿ; ಖರ್ಗೆ, ದೀದಿ, ಲಾಲುಗೆ ಪರೋಕ್ಷವಾಗಿ ಮೋದಿ ತಿರುಗೇಟು!

Published : Feb 24, 2025, 05:32 AM ISTUpdated : Feb 24, 2025, 08:55 AM IST
 ಮಹಾಕುಂಭ ಮೇಳ ಟೀಕಿಸುವುದು ಗುಲಾಮಗಿರಿಯ ಮನಸ್ಥಿತಿ; ಖರ್ಗೆ, ದೀದಿ, ಲಾಲುಗೆ ಪರೋಕ್ಷವಾಗಿ  ಮೋದಿ ತಿರುಗೇಟು!

ಸಾರಾಂಶ

ಪ್ರಧಾನಿ ಮೋದಿ ಅವರು ಧಾರ್ಮಿಕ ಆಚರಣೆಗಳನ್ನು ಟೀಕಿಸುವವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಗುಲಾಮಗಿರಿ ಮನಸ್ಥಿತಿಯ ಪ್ರತೀಕ ಎಂದಿದ್ದಾರೆ. ಕುಂಭಮೇಳವು ಏಕತೆಯ ಸಂಕೇತವಾಗಿದ್ದು, ಟೀಕಾಕಾರರಿಗೆ ಇದೇ ಉತ್ತರ ಎಂದು ಹೇಳಿದ್ದಾರೆ. ಅಲ್ಲದೆ ಕ್ಯಾನ್ಸರ್ ವಿರುದ್ಧ ಹೋರಾಡಲು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆಯೂ ಮಾತನಾಡಿದ್ದಾರೆ.

ದೇಶದ ಧಾರ್ಮಿಕ ಮತ್ತು ಸಾಂಪ್ರದಾಯಿಕ ಆಚರಣೆಗಳನ್ನು ವಿರೋಧಿಸುವುದು ಗುಲಾಮಗಿರಿ ಮನಸ್ಥಿತಿಯಾಗಿದ್ದು ಇದಕ್ಕೆ ವಿದೇಶಗಳಿಂದ ಕುಮ್ಮಕ್ಕು ಸಿಗುತ್ತಿದೆ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಪ್ರಯಾಗ್‌ರಾಜ್‌ನ ಮಹಾಕುಂಭಮೇಳವು ‘ಏಕತೆಯ ಮಹಾಕುಂಭ’ ಆಗಿದ್ದು, ಟೀಕಾಕಾರರಿಗೆ ಇದೇ ಉತ್ತರ’ ಎಂದು ಬಣ್ಣಿಸಿದ್ದಾರೆ.

ಇತ್ತೀಚೆಗೆ ಕುಂಭಮೇಳದ ಬಗ್ಗೆ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ಲಾಲು ಪ್ರಸಾದ್‌ ಯಾದವ್‌ ಹಾಗೂ ಅಖಲೇಶ್ ಯಾದವ್‌ ಕೆಲವು ಟೀಕೆಗಳನ್ನು ಮಾಡಿದ್ದರು. ‘ಮೃತ್ಯುಕುಂಭ’, ’ಕುಂಭಮೇಳ ಎಂಬುದು ಓಳು’ ಎಂದಿದ್ದರು. ಅದರ ಬೆನ್ನಲ್ಲೇ ಮೋದಿ ಈ ತಿರುಗೇಟು ನೀಡಿದ್ದಾರೆ 

ಇದನ್ನೂ ಓದಿ: 'ಕಾಂಗ್ರೆಸ್ ನಿರ್ಲಕ್ಷ್ಯ ಮಾಡಿದ್ರೆ ನಾನು ಬೇರೆ ದಾರಿ ನೋಡಿಕೊಳ್ತೇನೆ': ಸಂಚಲನ ಸೃಷ್ಟಿಸಿದ ಶಶಿ ತರೂರ್ ಹೇಳಿಕೆ!

ಭಾನುವಾರ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಬಾಗೇಶ್ವರ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಕೇಂದ್ರ ಮತ್ತು ಕ್ಯಾನ್ಸರ್ ಆಸ್ಪತ್ರೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಪ್ರಧಾನಿ, ‘ಇತ್ತೀಚಿನ ದಿನಗಳಲ್ಲಿ ಧರ್ಮವನ್ನು ಅಪಹಾಸ್ಯ ಮಾಡುವ, ಜನರನ್ನು ವಿಭಾಗಿಸುವಲ್ಲಿ ತೊಡಗಿಕೊಂಡಿರುವ ವರ್ಗವಿದೆ. ಹಲವು ಬಾರಿ ವಿದೇಶಿ ಶಕ್ತಿಗಳು ಸಹ ಈ ಜನರನ್ನು ಬೆಂಬಲಿಸುವ ಮೂಲಕ ದೇಶ ಮತ್ತು ಧರ್ಮವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ. ಇದು ಗುಲಾಮಗಿರಿ ಮನಸ್ಥಿತಿ’ ಎಂದರು.

ಆದರೆ ಇದೇ ವೇಳೆ, ಮಹಾಕುಂಭಮೇಳದಲ್ಲಿ ಶ್ರಮಿಸಿದ ನೈರ್ಮಲ್ಯ ಕಾರ್ಮಿಕರು ಮತ್ತು ಪೊಲೀಸರ ಕಾರ್ಯಕ್ಕೂ ಮೆಚ್ಚುಗೆ ವ್ಯಕ್ತ ಪಡಿಸಿದ ಮೋದಿ, ‘ಈ ಏಕತೆಯ ಮಹಾಕುಂಭದಲ್ಲಿ ಸಾವಿರಾರು ವೈದ್ಯರು ಮತ್ತು ಸ್ವಯಂಸೇವಕರು ಸ್ವಯಂಪ್ರೇರಣೆಯಿಂದ ಸಮರ್ಪಣಾಭಾವ ಮತ್ತು ಸೇವಾ ಮನೋಭಾವನೆಯಿಂದ ತೊಡಗಿಸಿಕೊಂಡಿದ್ದಾರೆ. ಏಕತೆಯ ಮಹಾಕುಂಭಮೇಳಕ್ಕೆ ಹೋದ ಜನರು ಇದನ್ನು ಶ್ಲಾಘಿಸುತ್ತಿದ್ದಾರೆ’ ಎಂದರು.

ಇದನ್ನೂ ಓದಿ:  ಮುಂಬರುವ ಚುನಾವಣೆ ಸೋತರೆ ರಾಜ್ಯ ನಾಯಕರೇ ಹೊಣೆ: ಮಲ್ಲಿಕಾರ್ಜುನ ಖರ್ಗೆ

ಸಿಗರೇಟು, ಬೀಡಿ ಬಿಡಿ:

ಕಾರ್ಯಕ್ರಮದಲ್ಲಿ ಮೋದಿ, ಕ್ಯಾನ್ಸರ್‌ ವಿರುದ್ಧ ಹೋರಾಡುವಲ್ಲಿ ಸರ್ಕಾರದ ಪ್ರಯತ್ನಗಳನ್ನು ಉಲ್ಲೇಖಿಸಿ ಮಾತನಾಡಿ, ಈ ವರ್ಷದ ಬಜೆಟ್‌ನಲ್ಲಿ ಕ್ಯಾನ್ಸರ್‌ ವಿರುದ್ಧ ಹೋರಾಡಲು ಹಲವು ಘೋಷಣೆಗಳನ್ನು ಮಾಡಲಾಗಿದೆ. ಕ್ಯಾನ್ಸರ್‌ ಔಷಧಿಗಳನ್ನು ಅಗ್ಗವಾಗಿಸಲು ನಿರ್ಧರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್‌ ಡೇಕೇರ್‌ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.
ಅಲ್ಲದೆ, ಕ್ಯಾನ್ಸರ್‌ ಕಾರಕ ಸಿಗರೇಟು, ಬೀಡಿ ಹಾಗೂ ತಂಬಾಕು ಸೇವನೆಯನ್ನು ಜನರು ಬಿಡಬೇಕು ಎಂದು ಕರೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಜೆ ಮುಗಿಸಿ ವಾಪಾಸ್‌ ಬಂದ ಬಾಲಕಿಯರಿಗೆ ಪ್ರೆಗ್ನೆನ್ಸಿ ಟೆಸ್ಟ್‌, ಸರ್ಕಾರಿ ಗರ್ಲ್ಸ್‌ ಹಾಸ್ಟೆಲ್‌ನ ಹೊಸ ನಿಯಮಕ್ಕೆ ಆಕ್ರೋಶ
ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ: 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ