
ಮೇರಠ್ (ಉ.ಪ್ರ.): ಮರ್ಚಂಟ್ ನೇವಿ ಅಧಿಕಾರಿ ಪತಿ ಸೌರಭ್ ರಜಪೂತ್ರನ್ನು ಕ್ರೂರವಾಗಿ ಕೊಂದು ದೇಹವನ್ನು ತುಂಡರಿಸಿ ಡ್ರಂನಲ್ಲಿ ತುಂಬಿಟ್ಟ ಆರೋಪ ಹೊತ್ತಿರುವ ಆತನ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ತಮ್ಮನ್ನು ಜೈಲಿನ ಒಂದೇ ಕೋಣೆಯಲ್ಲಿಡಲು ವಿನಂತಿಸಿದ್ದಾರೆ. ಅಲ್ಲದೆ, ಡ್ರಗ್ಸ್ ವ್ಯಸನಿಗಳಾಗಿರುವ ಇವರು ಅದಿಲ್ಲದೇ ಒದ್ದಾಡಿದ್ದು, ಡ್ರಗ್ಸ್ ಬೇಡಿಕೆ ಇಟ್ಟರು ಎಂದು ಗೊತ್ತಾಗಿದೆ. Aದರೆ ಜೈಲಧಿಕಾರಿಗಳು ಅವರ ಕೋರಿಕೆಯನ್ನು ನಿರಾಕರಿಸಿದ್ದಾರೆ. ಪ್ರಸ್ತುತ ಅಕ್ಕಪಕ್ಕದ ಸೆಲ್ಗಳಲ್ಲಿದ್ದಾರೆ.
‘ಜೈಲಿನ ನಿಯಮಗಳ ಪ್ರಕಾರ ಮಹಿಳಾ ಮತ್ತು ಪುರುಷ ಕೈದಿಗಳ ಬ್ಯಾರಕ್ಗಳಿಗೆ ಯಾವುದೇ ಸಂಪರ್ಕ ಇರುವಂತಿಲ್ಲ. ಅವರಿಬ್ಬರೂ ಮಾದಕ ವ್ಯಸನಿಗಳಾಗಿದ್ದಾರೆ. ಜೈಲಿನಲ್ಲಿ ಮಾದಕ ವಸ್ತು ಸಿಗದ ಕಾರಣ ತೊಳಲಾಟದಲ್ಲಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹಿರಿಯ ಜೈಲು ಅಧೀಕ್ಷಕ ವಿರೇಶ್ ರಾಜ್ ಶರ್ಮಾ ತಿಳಿಸಿದ್ದಾರೆ.
ವಕೀಲರೂ ಇಲ್ಲ:
‘ಕುಟುಂಬಸ್ಥರು ನನ್ನ ಪರವಾಗಿ ವಾದ ಮಾಡಲು ವಕೀಲರನ್ನು ನೇಮಿಸುವುದಿಲ್ಲ ಎಂದು ತಿಳಿಸಿದ್ದಾರೆ, ಹಾಗಾಗಿ ಸರ್ಕಾರಿ ವಕೀಲರನ್ನು ನನ್ನ ಪರ ವಾದಿಸಲು ನೇಮಿಸಿ’ ಎಂದು ಮುಸ್ಕಾನ್ ವಿನಂತಿ ಮಾಡಿರುವುದಾಗಿಯೂ ಜೈಲಧಿಕಾರಿಗಳು ತಿಳಿಸಿದ್ದಾರೆ.
ಮಗಳ ಹುಟ್ಟುಹಬ್ಬಕ್ಕೆ ಬಂದ ಮರ್ಚಂಟ್ ನೇವಿ ಅಧಿಕಾರಿ ಕತೆ ಮುಗಿಸಿದ ಪತ್ನಿ, ಆಕೆಯ ಪ್ರಿಯಕರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ