ಮೋದಿ ಸರ್ಕಾರದ ಮಹತ್ವದ ನಿರ್ಧಾರ, ಸ್ವರ್ಣ ಮಂದಿರಕ್ಕೆ ವಿದೇಶೀ ಅನುದಾನ!

Published : Sep 10, 2020, 03:33 PM IST
ಮೋದಿ ಸರ್ಕಾರದ ಮಹತ್ವದ ನಿರ್ಧಾರ, ಸ್ವರ್ಣ ಮಂದಿರಕ್ಕೆ ವಿದೇಶೀ ಅನುದಾನ!

ಸಾರಾಂಶ

ಅಮೃತಸರದ ಸ್ವರ್ಣ ಮಂದಿರ ಎಂದೇ ಖ್ಯಾತಿ ಗಳಿಸಿರುವ ಶ್ರೀ ಹರ್ಮಂದಿರ್ ಸಾಹಿಬ್‌ಗೆ ಇನ್ಮುಂದೆ ಸಿಗಲಿದೆ ವಿದೇಶೀ ಅನುದಾನ| ಮೋದಿ ಸರ್ಕಾರದ ಹತ್ವದ ನಿರ್ಧಾರ| ಟ್ವೀಟ್ ಮಾಡಿ ಮಾಹಿತಿ ನೀಡಿದ ಗೃಹ ಸಚಿವ ಅಮಿತ್ ಶಾ

ಅಮೃತಸರ(ಸೆ.10): ಗೃಹ ಸಚಿವಾಲಯದ ವಿದೇಶೀ ಅನುದಾನ ಅಧಿನಿಯಮ(FCRA)2010ರ ಅನ್ವಯ ಅಮೃತಸರದ ಸ್ವರ್ಣ ಮಂದಿರ ಎಂದೇ ಖ್ಯಾತಿ ಗಳಿಸಿರುವ ಶ್ರೀ ಹರ್ಮಂದಿರ್ ಸಾಹಿಬ್- ದರ್ಬಾರ್ ಸಾಹಿಬ್ ಪಂಜಾಬ್‌ನ್ನು ನೋಂದಾವಣೆಗೊಳಿಸಲು ಅನುಮತಿ ನೀಡಲಾಗಿದೆ. ಅಲ್ಲದೇ ಈ ನಿರ್ಧಾರದಿಂದ ನಮ್ಮ ಸಿಖ್ ಸಹೋದರಿ ಹಾಗೂ ಸಹೋದರರ ಸೇವಾ ಮನೋಭಾವಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ಗೃಹ ಅಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಈ ನೋಂದಾವಣೆ ಮುಂದಿನ ಐದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಈ ವೇಳೆ ಅಮೃತಸರದ ಸ್ವರ್ಣ ಮಂದಿರ ವಿದೇಶೀ ಅನುದಾನವೂ ಪಡೆಯಲು ಅರ್ಹವಾಗಿರುತ್ತದೆ. ಇದು ಅಲ್ಲಿ ಸಿಗುವ ಸೇವೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಲಿದೆ.

ಈ ಸಂಬಂಧ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, ಶ್ರೀ ದರ್ಬಾರ್‌ ಸಾಹಿಬ್‌ನ ದಿವ್ಯತೆ ನಮಗೆ ಶಕ್ತಿ ಒದಗಿಸುತ್ತದೆ. ದಶಕಗಳಿಂದ ವಿಶ್ವದ ಮೂಲೆ ಮೂಲೆಯಲ್ಲಿರುವ ಶ್ರದ್ಧಾಳುಗಳು ಅಲ್ಲಿ ತಮ್ಮ ಸೇವೆ ನೀಡಲು ಅಸಮರ್ಥರಾಗಿದ್ದರು. ಆದರೀಗ ಶ್ರೀ ಹರ್ಮಂದಿರ್‌ ಸಾಹಿಬ್‌ಗೆ FCRA ಅನುಮತಿ ನೀಡುವ ಪಿಎಂ ಮೋದಿ ಸರ್ಕಾರದ ನಿರ್ಧಾರದಿಂದ ವಿಶ್ವ ಹಾಗೂ ದರ್ಬಾರ್‌ ಸಾಹಿಬ್‌ ನಡುವಿನ ಸೇವಾ ಸಂಬಂಧ ಮತ್ತಷ್ಟು ಆಳವಾಗಲಿದೆ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು