ಕೊರೋನಾ ಆತಂಕದ ಬೆನ್ನಲ್ಲೇ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ; ಎಪ್ರಿಲ್ 1 ರಿಂದ ಹೊಸ ರೂಲ್ಸ್!

Published : Mar 23, 2021, 08:07 PM IST
ಕೊರೋನಾ ಆತಂಕದ ಬೆನ್ನಲ್ಲೇ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ; ಎಪ್ರಿಲ್ 1 ರಿಂದ ಹೊಸ ರೂಲ್ಸ್!

ಸಾರಾಂಶ

ಲಾಕ್‌ಡೌನ್ ಘೋಷಿಸಿ ಒಂದು ವರ್ಷದ ಬಳಿಕ ಇದೀಗ ಮತ್ತೆ ಕೊರೋನಾ ಆತಂಕ ಹೆಚ್ಚಾಗಿದೆ. ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಹರಸಾಹಸ ಪಡುತ್ತಿದೆ. ಇದರ ನಡುವೆ ಕೇಂದ್ರ ಗೃಹ ಸಚಿವಾಲಯ ಕೊರೋನಾ ಮಾರ್ಗಸೂಚಿ ಪ್ರಕಟಿಸಿದೆ.

ನವದೆಹಲಿ(ಮಾ.23): ಕೇಂದ್ರ ಗೃಹ ಸಚಿವಾಲಯ ನೂತನ ಕೊರೋನಾ ಮಾರ್ಗಸೂಚಿ ಪ್ರಕಟಿಸಿದೆ. ಕೊರೋನಾ ವೈರಸ್ ನಿಯಂತ್ರಣ, ಕಠಿಣ ನಿಯಮ ಎಪ್ರಿಲ್ 1 ರಿಂದ ಎಪ್ರಿಲ್ 30ರ ವರೆಗೆ ಇರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.  ಟೆಸ್ಟ್, ಟ್ರಾಕ್ ಹಾಗೂ ಟ್ರೀಟ್ ಈ ತ್ರಿಬಲ್ ಟಿ ವಿಚಾರದಲ್ಲಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ಪಾಲಿಸಬೇಕು ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಆರ್ಭಟ: ಮತ್ತೆ ಕರುನಾಡನ್ನೇ ಬೆಚ್ಚಿಬೀಳಿಸಿದ ಮಹಾಮಾರಿ

ಅಂತರ್ ರಾಜ್ಯ ಹಾಗೂ ರಾಜ್ಯದೊಳಗಿನ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಂತರ್ ರಾಜ್ಯ ಸಂಚಾರಕ್ಕೆ ಪರವಾನಗೆ ಪಡೆಯುವ ಅವಶ್ಯಕತೆ ಇಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟವಾಗಿ ಹೇಳಿದೆ. ಆದರೆ ವಿದೇಶ ಪ್ರಯಾಣ ಹಾಗೂ ವಿದೇಶದಿಂದ ಆಗಮಿಸುವವರ ಮೇಲೆ ನಿಗಾ ಇಡಲು ಆಯಾ ರಾಜ್ಯ ಸರ್ಕಾರಗಳು ಕಟ್ಟು ನಿಟ್ಟಿನ ನಿರ್ಧಾರ ಕೈಗೊಳ್ಳಬೇಕು ಎಂದಿದೆ.

ಎಲ್ಲಾ ಸರ್ಕಾರಗಳು ಕೊರೋನಾ ಪರೀಕ್ಷೆ ಹೆಚ್ಚು ಮಾಡಿಸಬೇಕು. ಕೊರೋನಾ ಹಾಟ್ ಸ್ಪಾಟ್ ಹುಡುಕಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು.  ಆರ್‌ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣ ವನ್ನು ಶೇಕಡಾ 70 ಅಥವಾ ಅದಕ್ಕಿಂತ ಹೆಚ್ಚಿನ ಮಟ್ಟಕ್ಕೆ ಏರಿಸಬೇಕು.  ಪಾಸಿಟೀವ್ ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ, ಕ್ವಾರಂಟೈನ್ ಸೇರಿದಂತೆ ಕೊರೋನಾ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು ಎಂದು ಕೇಂದ್ರ ಹೇಳಿದೆ.

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಸೇರಿದಂತೆ ಕೊರೋನಾ ಮಾರ್ಗಸೂಚಿ ಪಾಲನೆಗೆ ರಾಜ್ಯ ಸರ್ಕಾರಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಎಪ್ರಿಲ್ 1 ರಿಂದ ಆಯಾ ರಾಜ್ಯಗಳು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದೆ. ಕೊರೋನಾ ಲಸಿಕೆ ನೀಡುವಿಕೆಯನ್ನು ಹೆಚ್ಚಿಸಬೇಕು ಎಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?