
ನವದೆಹಲಿ (ಏ.09): ಕೊರೋನಾ ಸೋಂಕು ನಿಯಂತ್ರಿಸಲು ಕಳೆದ ವರ್ಷ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರು ಈಗ ಮತ್ತೆ ಗುಳೆ ಆರಂಭಿಸಿದ್ದಾರೆ.
ವಿವಿಧ ರಾಜ್ಯಗಳು ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಲಾಕ್ಡೌನ್ ನಿರ್ಧಾರ ಪ್ರಕಟಿಸುತ್ತಿದ್ದಂತೆ ಊರಿಗೆ ಹೊರಡಲು ಆರಂಭಿಸಿದ್ದಾರೆ.
ಮುಂಬೈ, ಬೆಂಗಳೂರಿನಿಂದ ಎರಡು ದಿನದ ಹಿಂದೆಯೇ ತವರು ರಾಜ್ಯಗಳಿಗೆ ವಲಸೆ ಆರಂಭಿಸಿದ್ದ ಕಾರ್ಮಿಕರು ಇದೀಗ ದೆಹಲಿ, ಪುಣೆ, ಗುಜರಾತಿನ ಸೂರತ್ ಹಾಗೂ ಅಹಮದಾಬಾದ್ನಿಂದಲೂ ತವರು ರಾಜ್ಯಗಳಿಗೆ ದೊಡ್ಡ ಸಂಖ್ಯೆಯಲ್ಲಿ ಮರಳತೊಡಗಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಕರ್ಫ್ಯೂ ರಾಜ್ಯಕ್ಕೆ ವಿಸ್ತರಣೆ; CM ಯಡಿಯೂರಪ್ಪ! ...
ದೇಶದಲ್ಲಿ ಈಗಾಗಲೇ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಲಕ್ಷ ಲಕ್ಷ ಕೇಸ್ಗಳು ದಾಖಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ