Military Chopper Crashed in Tamil Nadu: ಸೇನಾ ಹೆಲಿಕಾಪ್ಟರ್ ಪತನ, 4 ಸಾವು: ಬಿಪಿನ್ ರಾವತ್ ಸ್ಥಿತಿ ಗಂಭೀರ

By Suvarna NewsFirst Published Dec 8, 2021, 1:47 PM IST
Highlights

* ಹಿರಿಯ ಸೇನಾಧಿಕಾರಿಗಳಿದ್ದ ಹೆಲಿಕಾಪ್ಟರ್ ಪತನ, ಏಳು ಸಾವು

* ಊಟಿ ಸಮೀಪದಲ್ಲಿ ಹೆಲಿಕಾಪ್ಟರ್‌ ಪತನ

* ಜನರಲ್ ಬಿಪಿನ್‌ ರಾವತ್ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ವೆಲ್ಲಿಂಗ್ಟನ್‌(ಡಿ.08): ಬುಧವಾರ ಮಧ್ಯಾಹ್ನ ತಮಿಳುನಾಡಿನ ಕೂನೂರಿನಲ್ಲಿ (Tamil Nadu's Coonoor) ಭಾರತೀಯ ವಾಯುಸೇನಾ ಹೆಲಿಕಾಪ್ಟರ್‌ವೊಂದು ಪತನಗೊಂಡಿದೆ (Indian Air Force helicopter Crash). ಈ ಎಂಐ-17 ಹೆಲಿಕಾಪ್ಟರ್‌ನಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ (Chief of Defence Staff, General Bipin Rawat), ಅವರ ಪತ್ನಿ ಮಧುಲಿಕಾ ರಾವತ್, ಇಬ್ಬರು ಪೈಲಟ್‌ಗಳು, ಬ್ರಿಗೇಡಿಯರ್ ಶ್ರೇಣಿಯ 9 ಮಂದಿ ಸಿಬ್ಬಂದಿ ಇದ್ದರು. ಏಳು ಮೃತದೇಹಗಳು ಪತ್ತೆಯಾಗಿದ್ದು, ಯಾರದ್ದು ಎಂಬ ಮಾಹಿತಿ ತಿಳಿದು ಬಂದಿಲ್ಲ. ಘಟನೆಯಲ್ಲಿ ಗಾಯಗೊಂಡವರನ್ನು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡಿಎಸ್‌ ಬಿಪಿನ್ ರಾವತ್ ಆರೋಗ್ಯ ಸ್ಥಿತಿ ಗಂಭೀರ ಎನ್ನಲಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಿದ್ದರೂ ರಾವತ್ ಅವರ ಪತ್ನಿ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆಂದು ಮೂಲ;ಗಳು ತಿಳಿಸಿವೆ. 

ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಹೆಲಿಕಾಪ್ಟರ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಊಟಿ ಸ್ಟಾಫ್ ಕಾಲೇಜಿನಲ್ಲಿ ಸಿಡಿಎಸ್ ರಾವತ್ ಉಪನ್ಯಾಸ ಕಾರ್ಯಕ್ರಮವಿತ್ತು ಎಂದು ಹೇಳಲಾಗುತ್ತಿದೆ. ಇಲ್ಲಿಂದ ಸೂರೂರಿಗೆ ಹೋಗಿ ಅಲ್ಲಿಂದ ದೆಹಲಿಗೆ ಮರಳಬೇಕಿತ್ತು. ಸಿಡಿಎಸ್ ಜನರಲ್ ಬಿಪಿನ್ ರಾವತ್ ಕೂಡ ಹೆಲಿಕಾಪ್ಟರ್‌ನಲ್ಲಿದ್ದರು. ಯಾರನ್ನೆಲ್ಲಾ ಈವರೆಗೆ ರಕ್ಷಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಹೆಲಿಕಾಪ್ಟರ್‌ನಲ್ಲಿ ಜನರಲ್ ರಾವತ್ ಕೂಡ ಇದ್ದರು ಎಂದು ಹೇಳಲಾಗುತ್ತಿದೆ.

Military chopper crashes in Tamil Nadu. Senior officials were on board. More details awaited. pic.twitter.com/j3jXy66q6k

— ANI (@ANI)

ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆಯಾ ಅಥವಾ ತಾಂತ್ರಿಕ ದೋಷದಿಂದ ಸಂಭವಿಸಿದೆಯಾ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.  ಜನರನ್ನು ರಕ್ಷಿಸುವ ಕಾರ್ಯ ಮುಂದುವರಿದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಸಿಡಿಎಸ್ ಬೆಂಗಾವಲು ಪಡೆಯಲ್ಲಿ ಎರಡು ಹೆಲಿಕಾಪ್ಟರ್‌ಗಳಿದ್ದವು. ಆದರೆ ಅಪಘಾತಕ್ಕೆ ಬಲಿಯಾದ ಹೆಲಿಕಾಪ್ಟರ್‌ನಲ್ಲಿ ಸಿಡಿಎಸ್ ಇತ್ತು ಎಂದು ಮೂಲಗಳು ಹೇಳುತ್ತವೆ. ಇದುವರೆಗೂ ಸೇನೆ ಮತ್ತು ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ದಟ್ಟ ಅರಣ್ಯ ಪ್ರದೇಶವಾದ ನೀಲಗಿರಿ ಪ್ರದೇಶದಲ್ಲಿ ಅಪ್ಪಳಿಸಿದೆ. ಅಪಘಾತದ ನಂತರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದೆ.

ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದವರ ಪಟ್ಟಿ

ಎಂಐ-17 ಹೆಲಿಕಾಪ್ಟರ್ ಅನ್ನು ವಿವಿಐಪಿ ಚಲನೆಯಲ್ಲಿ ಬಳಸಲಾಗುತ್ತದೆ

ಸೇನಾ ಅಧಿಕಾರಿಗಳು ಹೋಗುವ ಹೆಲಿಕಾಪ್ಟರ್ ಟ್ವಿನ್ ಇಂಜಿನ್ ಹೊಂದಿದೆ. ಅಪಘಾತ ನಡೆದ ಎಂಐ 17ರಲ್ಲಿ ಪ್ರಧಾನಿ, ರಕ್ಷಣಾ ಸಚಿವರಂತಹ ವಿವಿಐಪಿಗಳೂ ಸವಾರಿ ಮಾಡುತ್ತಾರೆ. ಸೇನೆ ಮತ್ತು ವಾಯುಪಡೆ ಈ ಹೆಲಿಕಾಪ್ಟರ್ ಅನ್ನು ವಿವಿಐಪಿಗಾಗಿ ಬಳಸುತ್ತವೆ. ಇದರಲ್ಲಿ ಎರಡು ಎಂಜಿನ್ ಗಳಿದ್ದು, ಯಾವುದೇ ಸಂದರ್ಭದಲ್ಲೂ ಮತ್ತೊಂದು ಎಂಜಿನ್ ಬಳಸಿ ಸರಿಯಾದ ಜಾಗಕ್ಕೆ ತರಬಹುದು ಎನ್ನಲಾಗಿದೆ.

click me!