
ನವದೆಹಲಿ(ಮೇ 08) ಲಾಕ್ ಡೌನ್ ಪಾಲಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಮೇಲಿಂದ ಮೇಲೆ ಸರ್ಕಾರ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಹೇಳುತ್ತಲೇ ಬಂದಿವೆ. ನಿಜವಾದ ಕಾಳಜಿ ಇದ್ದವರು ಪಾಲಿಸಿಕೊಂಡು ಬಂದಿದ್ದಾರೆ. ಆದರೆ ಈ ಮನುಷ್ಯ ಮಾಡಿರುವ ಪ್ಲಾನ್ ಮಾತ್ರ ಎಲ್ಲಕ್ಕಿಂತ ಮಿಗಿಲಾಗಿದೆ.
ಈ ಹಾಲುಮಾರುವವ ಮಾಡಿಕೊಂಡಿರುವ ಪ್ಲಾನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದೆ. ದೊಡ್ಡ ಮಟ್ಟದ ಚರ್ಚೆಗೆ ವೇದಿಕೆ ಸೃಷ್ಟಿ ಮಾಡಿದೆ.
ಕೊರೋನಾಕ್ಕೆ ಲಸಿಕೆ ಕಂಡು ಹಿಡಿದ ಚೀನಾ
ಐಎಎಸ್ ಅಧಿಕಾರಿ ನಿತಿನ್ ಸಂಗ್ವಾನ್ ಹಾಲು ಮಾರಾಟಗಾರನ ಮಾಸ್ಟರ್ ಪ್ಲಾನ್ ನ್ನು ಶೇರ್ ಮಾಡಿದ್ದಾರೆ. ಹಾಲು ಮಾರಾಟಗಾರ ಮತ್ತು ಹಾಲು ಖರೀದಿ ಮಾಡುವವರು ಇಬ್ಬರು ಮಾಸ್ಕ್ ಧರಿಸಿದ್ದಾರೆ. ಆದರೆ ಸಾಮಾಜಿಕ ಅಂತರ ಕಡಿಮೆ ಆಗುತ್ತದೆ ಎಂದು ಪೈಪ್ ಒಂದನ್ನು ಅಳವಡಿಸಿಕೊಂಡಿದ್ದಾನೆ.
ಇದೊಂದು ಸಾಮಾನ್ಯ ಜ್ಞಾನದಲ್ಲಿ ತಯಾರು ಮಾಡಿದ ಹೊಸ ಆಲೋಚನೆ ಆಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ರೆಸ್ಪಾನ್ಸ್ ಪಡೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ