ರಾತ್ರಿ 8 ಗಂಟೆಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಹತ್ವದ ಘೋಷಣೆ, ತೀವ್ರ ಕುತೂಹಲ ಕೆರಳಿಸಿದ ನಡೆ

Published : Jul 24, 2026, 07:38 PM IST
Dharmendra Pradhan Surprise 8 PM Announcement

ಸಾರಾಂಶ

ಇಂದು (ಜು.24) ರಾತ್ರಿ ಗಂಟೆಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಹಲವು ಘೋಷಣೆಗಳು ಹೊರಬೀಳಲಿದೆ. ನೀಟ್ ಪೇಪರ್ ಲೀಕ್ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪ್ರಧಾನ್ ನಡೆ ತೀವ್ರ ಕುತೂಹಲ ಕೆರಳಿಸಿದೆ.

ನವದೆಹಲಿ (ಜು.24) ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶಾದ್ಯಂದ ನೀಟ್ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ, ವಿದ್ಯಾರ್ಥಿಗಳು ಸೇರಿದಂತೆ ಹಲವು ಸಂಘಟನೆಗಳು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದೆ. ಕಾಕ್ರೋಚ್ ಜನತಾ ಪಾರ್ಟಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಮ್ಮ ಬೇಡಿಕೆ ಸಲ್ಲಿಸಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು (ಜುಲೈ 24) ರಾತ್ರಿ 8 ಗಂಟೆಗೆ ಜನತೆಯನ್ನುದ್ದೇಶಿ ಮಾತನಾಡಲಿದ್ದಾರೆ. ಹಲವು ಮಹತ್ವದ ಘೋಷಣೆಗಳು ಹೊರಬೀಳಲಿದೆ.

ರಾಜೀನಾಮೆ ಘೋಷಿಸ್ತಾರ ಧರ್ಮೇಂದ್ರ ಪ್ರಧಾನ್?

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹ ಹೆಚ್ಚಾಗುತ್ತಿರುವ ಬೆನ್ನಲ್ಲೇ 8 ಗಂಟೆಗೆ ವಿದ್ಯಾರ್ಥಿಗಳು ಸೇರಿದಂತೆ ಜನತೆಯನ್ನುದ್ದೇಶಿ ಧರ್ಮೇಂದ್ರ ಪ್ರಧಾನ್ ಮಾತನಾಡಲಿದ್ದಾರೆ. ಈ ಮಾಹಿತಿ ಹೊರಬಿದ್ದ ಬೆನ್ನಲ್ಲೇ ರಾಜೀನಾಮೆ ಮಾತುಗಳು ಕೇಳಿಬರುತ್ತಿದೆ. ಮೂಲಗಳ ಪ್ರಕಾರ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿಲ್ಲ. ಇದರ ಬದಲಾಗಿ ನ್ಯಾಷನಲ್ ಟೆಸ್ಟಿಂಗ್ ಎಜೆನ್ಸಿ ಸೇರಿದಂತೆ ಪರೀಕ್ಷಾ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆ ಕುರಿತು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

ಧರ್ಮೇದ್ರ ಪ್ರಧಾನ್ ಘೋಷಣೆ ಏನು?

2027ರಿಂದ ನೀಟ್ ಪರೀಕ್ಷೆ ಹೊಸ ಮಾದರಿಯಲ್ಲಿ ನಡೆಯಲಿದೆ. ಕಂಪ್ಯೂಟರ್ ಬೇಸ್ಡ್ ಪರೀಕ್ಷೆಯಾಗಲಿದೆ. ಜೊತೆಗೆ ನೀಟ್ ಮಾತ್ರವಲ್ಲ ಎಲ್ಲಾ ಪರೀಕ್ಷೆಗಳ ವಿಧಾನ, ಮೇಲ್ವಿಚಾರಣೆ ಬದಲಾಗಲಿದೆ. ಈ ಕುರಿತು ಈಗಾಗಲೇ ಹೊಸ ಮಸೂದೆ ಚರ್ಚೆಗಳು ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಧರ್ಮೇಂದ್ರ ಪ್ರಧಾನ್ ಮಾತನಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಕಾಕ್ರೋಚ್ ಜನತಾ ಪಾರ್ಟಿ ಪ್ರತಿನಿಧಿಗಳು ಇಂದು ಮತ್ತೆ ಜೆಪಿ ನಡ್ಡಾ ಹಾಗೂ ಜೇತಂದ್ರ ಸಿಂಗ್ ಭೇಟಿಯಾಗಿ ಮೂರು ಪ್ರಮುಖ ಬೇಡಿಕೆಯನ್ನು ಮಂದಿಟ್ಟಿದೆ. ಈ ಪೈಕಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ನೀಟ್ ಸಂತ್ರಸ್ತರಿಗೆ 1 ಕೋಟಿ ರೂಪಾಯಿ ಪರಿಹಾರ, ಸಂಸತ್ತಿನಲ್ಲಿ ನೀಟ್ ಹಾಗೂ ಪರೀಕ್ಷೆ ಕುರಿತು ಚರ್ಚೆ ಹಾಗೂ ಅಮೂಲಾಗ್ರ ಬದಲಾವಣೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸದಂತೆ ಬೇಡಿಕೆ ಸಲ್ಲಿಸಿದೆ. ಈ ಪೈಕಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಕೇಂದ್ರ ಸರ್ಕಾರ ಒಲವು ವ್ಯಕ್ತಪಡಿಸಿಲ್ಲ.

ರಾತ್ರಿ 8 ಗಂಟಗೆ ಧರ್ಮೇಂದ್ರ ಪ್ರಧಾನ್ ಹೇಳಿಕೆಗಾಗಿ ಇದೀಗ ಜನ ಕಾಯುತ್ತಿದ್ದಾರೆ. ಇತ್ತ ಪ್ರತಿಟನೆಯಲ್ಲಿ ನಿರತರಾಗಿರುವ ವಿದ್ಯಾರ್ಥಿಗಳು ಧರ್ಮೇಂದ್ರ ಪ್ರಧಾನ್ ಮಾತಿನ ಬಳಿಕ ಪ್ರತಿಭಟನೆ ರೂಪುರೇಶೆ ನಿರ್ಧರಿಸಲು ಮುಂದಾಗಿದ್ದಾರೆ. ತಮ್ಮ ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ತೀವ್ರಗೊಳಿಸಲು ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಶ್ನೆಯೇ ಇಲ್ಲ, ಕೇಂದ್ರ ಸರ್ಕಾರದ ಮೂಲಗಳ ಸ್ಪಷ್ಟನೆ
ಕುಂಭಮೇಳ ಚೆಲುವೆ ಮೋನಾಲಿಸಾಗೆ ಪೊಲೀಸ್ ರಕ್ಷಣೆಗೆ 'ಒಕೆ' ಎಂದ ಕೋರ್ಟ್; ಎಲ್ಲಿದ್ದಾರೆ ಈಗ ರುದ್ರಾಕ್ಷಿ ಸುಂದರಿ?!