
ಮುಂಬೈ(ಏ.15): ಕೊರೋನಾ ರಣಕೇಕೆಯಿಂದ ತತ್ತರಿಸಿ ಹೋಗಿರುವ ದೇಶದ ಆರ್ಥಿಕತೆಯ ತ್ವರಿತ ಸುಧಾರಣೆಗಾಗಿ ಪ್ರತೀ ದಿನ 60 ಕಿ.ಮೀ ಹೆದ್ದಾರಿಯನ್ನು ನಿರ್ಮಾಣ ಮಾಡಬೇಕೆಂಬ ಗುರಿಯನ್ನು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಕಿಕೊಂಡಿದ್ದಾರೆ.
ಈ ಬಗ್ಗೆ ಮಂಗಳವಾರ ಡೆವಲಪರ್ಸ್ ಅಸೋಸಿಯೇಷನ್ ಕ್ರೆಡಾಯ್-ಎಂಸಿಎಚ್ಐ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಸಚಿವ ಗಡ್ಕರಿ ಅವರು, ದೇಶದ ಆರ್ಥಿಕ ಸುಧಾರಣೆಗಾಗಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಪ್ರತಿಪಾದಿಸಿದ್ದಾರೆ.
ಲಾಕ್ಡೌನ್ನಿಂದ ದೇಶಕ್ಕೆ 8 ಲಕ್ಷ ಕೋಟಿ ರು. ನಷ್ಟ!
ಇದಕ್ಕಾಗಿ ಈ ಹಿಂದೆ ಪ್ರತೀ ದಿನ 30 ಕಿ.ಮೀ ಉದ್ದದ ಹೆದ್ದಾರಿಯನ್ನು ನಿರ್ಮಾಣ ಮಾಡಬೇಕೆಂಬ ಮಹತ್ವಾಕಾಂಕ್ಷೆಯನ್ನು ಈಗಾಗಲೇ ಪೂರೈಸಿದ್ದೇವೆ. ಇದೀಗ, ದಿನಕ್ಕೆ 60 ಕಿ.ಮೀ ಉದ್ದದ ಹೆದ್ದಾರಿ ನಿರ್ಮಾಣ ಮಾಡುವ ಅಗತ್ಯವಿದೆ. ಈ ಮೂಲಕ ರಸ್ತೆ ಯೋಜನೆಗಳನ್ನು 2ರಿಂದ 3 ಪಟ್ಟು ಹೆಚ್ಚು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ