ಜೀವವಿಮೆ ಮೇಲಿನ ಜಿಎಸ್‌ಟಿ ರದ್ದತಿಗೆ ಸಚಿವರ ಶಿಫಾರಸು

Published : Oct 20, 2024, 08:37 AM IST
ಜೀವವಿಮೆ ಮೇಲಿನ ಜಿಎಸ್‌ಟಿ ರದ್ದತಿಗೆ ಸಚಿವರ ಶಿಫಾರಸು

ಸಾರಾಂಶ

ಜೀವವಿಮೆ ಪ್ರೀಮಿಯಂ ಮತ್ತು ಹಿರಿಯ ನಾಗರಿಕರ ಆರೋಗ್ಯ ವಿಮೆಯ ಮೇಲಿನ 18% ಜಿಎಸ್‌ಟಿ ತೆಗೆದುಹಾಕಲು ಸಚಿವರ ಸಮೂಹ ಶಿಫಾರಸು ಮಾಡಿದೆ. 20 ಲೀ. ನೀರಿನ ಬಾಟಲ್, ಬೈಸಿಕಲ್ ಮೇಲಿನ ಜಿಎಸ್‌ಟಿ ಶೇ.5ಕ್ಕೆ ಇಳಿಕೆ ಮತ್ತು ಐಷಾರಾಮಿ ವಸ್ತುಗಳ ಮೇಲೆ 28% ಜಿಎಸ್‌ಟಿ ವಿಧಿಸಲು ಶಿಫಾರಸು ಮಾಡಿದೆ.

ನವದೆಹಲಿ: ಜೀವವಿಮೆ ಪ್ರೀಮಿಯಂ ಮತ್ತು ಹಿರಿಯ ನಾಗರಿಕರ ಆರೋಗ್ಯ ವಿಮೆಯ ಮೇಲೆ ವಿಧಿಸಲಾಗುತ್ತಿದ್ದ ಶೇ.18ರಷ್ಟು ಜಿಎಸ್‌ಟಿ ತೆರಿಗೆಯನ್ನು ತೆಗೆದು ಹಾಕಬೇಕು ಎಂದು ಸರಕು- ಸೇವಾ ತೆರಿಗೆ (ಜಿಎಸ್‌) ಮಂಡಳಿಗೆ ಜಿಎಸ್ಟಿ ಕುರಿತ ರಾಜ್ಯ ಸಚಿವರ ಸಮೂಹ ಶಿಫಾರಸು ಮಾಡಿದೆ. ಇದೇ ವೇಳೆ, 20 ಲೀ. ನೀರಿನ ಬಾಟಲಿ, ಬೈಸಿಕಲ್ ಮೇಲಿನ ಜಿಎಸ್‌ಟಿಯನ್ನು ಶೇ.18ರಿಂದ ಶೇ.5ಕ್ಕೆ ಇಳಿಸಬೇಕು. ಆದರೆ ಐಷರಾಮಿ ಕೈಗಡಿ ಯಾರ ಮತ್ತು ಐಷರಾಮಿ ಶೂಗಳ ಮೇಲಿನ ಜಿಎಸ್ಟಿ ಪ್ರಮಾಣವನ್ನು ಶೇ.18ರಿಂದ ಶೇ.28ಕ್ಕೆ ಏರಿಸಬೇಕು ಎಂದೂ ಅದು ಶಿಫಾರಸಿನಲ್ಲಿ ತಿಳಿಸಿದೆ. ತನ್ನ ಶಿಫಾರಸನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯಸ್ಥರಾಗಿರುವ ಜಿಎಸ್‌ಟಿ ಮಂಡ ಳಿಗೆ ಸಮಿತಿ ಸಲ್ಲಿಸಿದೆ. ಈ ಬಗ್ಗೆ ಜಿಎಸ್‌ಟಿ ಮಂಡಳಿ ತನ್ನ ಮುಂದಿನ ತಿಂಗಳಿನ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಸಭೆ ನಿರ್ಣಯಗಳು: ಜೀವ ವಿಮೆ ಹಾಗೂ ಹಿರಿಯ ನಾಗರಿಕರ ಆರೋಗ್ಯ ವಿಮೆಯ 5 ಲಕ್ಷ ರು.ಗಳ ಕವರೇಜ್ ವರೆ ಗಿನ ವಿಮೆಗಳಿಗೆ ಜಿಎಸ್‌ಟಿಯಿಂದ ವಿನಾ ಯಿತಿ ನೀಡಬೇಕು ಎಂದು ಶಿಫಾರಸು ಮಾಡಲು ಸಭೆ ನಿರ್ಣಯಿಸಿತು. ಆದರೆ, 5 ಲಕ್ಷ ರು.ಗಿಂತ ಅಧಿಕ ಮೊತ್ತದ ಕವರೇಜ್‌ನ ವಿಮೆಗಳ ಮೇಲಿನ ಶೇ.18 ತೆರಿಗೆ ಮುಂದುವರೆಯಲಿದೆ. ಜೊತೆಗೆ, ಕವರೇಜ್ ಮೊತ್ತವನ್ನು ಲೆಕ್ಕಿಸದೆ, ಹಿರಿಯ ನಾಗರಿಕರ ವಿಮೆ ಮೇಲಿನ ತೆರಿಗೆಗಳನ್ನು ಜಿಎಸ್‌ಟಿ ಮಂಡಳಿ ರದ್ದು ಗೊಳಿಸುವ ನಿರೀಕ್ಷೆಯಿದೆ.

ಇ-ಆಸ್ತಿ ತಂತ್ರಾಂಶ: ಬಿಬಿಎಂಪಿ ವಿಳಂಬದಿಂದ ಎಡವಟ್ಟು?

ಇವುಗಳ ಮೇಲೆ ಜಿಎಸ್ಟಿ ಇಳಿಕೆ: ನೋಟ್ ಪುಸ್ತಕದ ಮೇಲಿನ ಶೇ.12ರಷ್ಟು ಜಿಎಸ್ಟಿ ಯನ್ನು ಶೇ.5ಕ್ಕೆ ಇಳಿಸಬೇಕು. 20 ಲೀ. ನೀರಿನ ಬಾಟಲಿ, 10,000 ರು.ಒಳಗಿನ ಬೈಸಿಕಲ್ ಮೇಲಿನ ಜಿಎಸ್ಟಿಯನ್ನು ಶೇ.5ಕ್ಕೆ ಇಳಿಸುವಂತೆ ಸಭೆ ನಿರ್ಣಯಿಸಿದೆ. ಜೊತೆಗೆ 25,000 ರು. ಮೇಲಿನ ಕೈಗಡಿ ಯಾರ, 15,000 ರು.ಮೇಲಿನ ಶೂಗಳ ಮೇಲೆ ಮೇಲೆ ಶೇ.18 ಶೇ.18ರಷ್ಟು ಜಿಎಸ್ಟಿ ವಿಧಿಸುವಂತೆ ಜಿಎಸ್‌ಟಿ ಮಂಡಳಿಗೆ ಸಚಿವರ ಸಮಿತಿ ಶಿಫಾರಸು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಯುತಿ ಬ್ರೇಕ್‌?: ದೇವೇಂದ್ರ ಫಡ್ನವಿಸ್‌ಗೆ ಕೈಕೊಟ್ಟ ಶಿಂಧೆ ಸೇನೆ, ರಾಜ್‌ ಠಾಕ್ರೆ ಎಂಎನ್‌ಎಸ್‌ ಜೊತೆ ಮೈತ್ರಿ!
77ನೇ ಗಣರಾಜ್ಯೋತ್ಸವ ಸಂಭ್ರಮ: ಶಾಲಾ ಮಕ್ಕಳ ಭಾಷಣಕ್ಕೆ ಇಲ್ಲಿದೆ ಸರಳ ಮತ್ತು ಪರಿಣಾಮಕಾರಿ ಟಿಪ್ಸ್!