
ರಾಯಪುರ: ಛತ್ತೀಸ್ಗಢದ ಸಚಿವರೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಬೀಡಿ ಸೇದಿದ್ದಲ್ಲದೇ, ಆದಿವಾಸಿ ವ್ಯಕ್ತಿಗೆ ಹೇಗೆ ಸೇದಬೇಕು ಎಂಬುದನ್ನು ಕಲಿಸುತ್ತಿರುವ ವಿಡಿಯೋ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.
ವಿಡಿಯೋದಲ್ಲಿ ಕವಾಸಿ ಲಖಮಾ ಎಂಬ ಸಚಿವರು ಬಸ್ತರ್ ಸಮೀಪ ಗ್ರಾಮವೊಂದರಲ್ಲಿ ತಮ್ಮ ಬೆಂಗಾವಲಿನ ಜೊತೆ ಬೀಡಿ ಸೇದುತ್ತಾ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆಸುಪಾಸಿನಲ್ಲಿ ಇದ್ದ ಬುಡಕಟ್ಟು ಜನರನ್ನು ತಮ್ಮ ಸಮೀಪಕ್ಕೆ ಕರೆದು ‘ಬೀಡಿಯ ಹೊಗೆಯನ್ನು ಬಾಯಿಯಿಂದ ಒಳಗೆ ತೆಗೆದುಕೊಂಡು ಮೂಗಿನಿಂದ ಹೊರಗೆ ಬಿಡಬೇಕು’ ಎಂದು ಹೇಳಿಕೊಡುತ್ತಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಜನರಿಂದ ಭಾರಿ ಆಕ್ರೋಶ ಕಾರಣವಾಗಿದೆ.
ಟಿಕೆಟ್ ಇಲ್ದೆ ವಂದೇ ಭಾರತ್ ರೈಲು ಹತ್ತಿದ: ಟಾಯ್ಲೆಟ್ ಒಳಗೆ ಬೀಡಿ ಸೇದಿ ತಗ್ಲಾಕ್ಕೊಂಡ ಭೂಪ!
ಬೆಂಗಳೂರು: ವಿಮಾನದಲ್ಲಿ ಬೀಡಿ ಸೇದಲು ಯತ್ನಿಸಿದ ಕೂಲಿ ಕಾರ್ಮಿಕ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ