
ನವದೆಹಲಿ(ಸೆ.16) ಗಂಗಾ ನಂದಿಯ ಪುನಶ್ಚೇತನ ಮತ್ತು ಸಂರಕ್ಷಣೆಯ ಉದ್ದೇಶ ಹೊಂದಿರುವ ನಮಾಮಿ ಗಂಗೆ ಅಭಿಯಾನಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಸಿಕ್ಕ ಉಡುಗೊರೆ ಹಾಗೂ ಸ್ಮರಣಿಕೆಗಳನ್ನು ಸಂಸ್ಕೃತಿ ಸಚಿವಾಲಯ ಇ-ಹರಾಜು ಮಾಡಲಿದೆ.
ಹೌದು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯವು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವೀಕರಿಸಿರುವ ಉಡುಗೊರೆಗಳು ಮತ್ತು ಸ್ಮರಣಿಕೆಗಳ ಇ-ಹರಾಜು ಆಯೋಜಿಸಿದೆ. ಈ ಸ್ಮರಣಿಕೆಗಳಲ್ಲಿ ಪದಕ ವಿಜೇತ ಒಲಿಂಪಿಕ್ ಕ್ರೀಡಾಪಟುಗಳು ಮತ್ತು ಪ್ಯಾರಾಲಿಂಪಿಕ್ ಕ್ರೀಡಾಪಟುಗಳ ಕ್ರೀಡಾ ಸಾಧನಗಳು ಮತ್ತು ಉಪಕರಣಗಳು, ಅಯೋಧ್ಯೆ ರಾಮ ಮಂದಿರ, ಚಾರ್ ಧಾಮ್, ರುದ್ರಾಕ್ಷ್ ಸಮಾವೇಶ ಕೇಂದ್ರದ ಪ್ರತಿರೂಪಗಳು, ಮಾದರಿಗಳು, ಶಿಲ್ಪಗಳು, ವರ್ಣಚಿತ್ರಗಳು, ಅಂಗವಸ್ತ್ರ ಮೊದಲಾದವುಗಳು ಸೇರಿವೆ.
ಗಂಗಾ ನದಿಯಲ್ಲಿ ತೇಲಿಬಂತು ಪೆಟ್ಟಿಗೆ; ತೆರೆದು ನೋಡಿದರೆ ಪುಟ್ಟ ಕಂದಮ್ಮ!
ಸೆಪ್ಟೆಂಬರ್ 17 ರಿಂದ ಈ ಇ-ಹರಾಜು ಪ್ರಕ್ರಿಯೆ ಆರಂಭವಾಗಲಿದ್ದು, ಈ ಉಡುಗೊರೆ ಹಾಗೂ ಸ್ಮರಣಿಕೆಗಳನ್ನು ಪಡೆಯಲು https://pmmementos.gov.in ವೆಬ್ ಸೈಟ್ ಮೂಲಕ ಇ -ಹರಾಜಿನಲ್ಲಿ ಭಾಗವಹಿಸಬಹುದು. ಈ ಹರಾಜಿನಲ್ಲಿ ಸಂಗ್ರಹವಾಗುವ ಹಣವನ್ನು ನಮಾಮಿ ಗಂಗೆ ಅಭಿಯಾನಕ್ಕೆ ಬಳಸಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ