
ನವದೆಹಲಿ(ಮಾ.26): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 59,118 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ದೇಶದಲ್ಲಿ 2ನೇ ಅಲೆ ಆರಂಭವಾಗಿದೆ ಅನ್ನೋ ಭೀತಿ ಇದೀಗ ಅವರಿಸಿದೆ. ಇದರ ನಡುವೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಇದೀಗ ರಾಜ್ಯ ಸರ್ಕಾರಗಳಿಗೆ ಕಟ್ಟುು ನಿಟ್ಟಿನ ಕ್ರಮಕ್ಕೆ ಆದೇಶಿಸಿದೆ. ಅದರಲ್ಲೂ ಹೋಳಿ, ಈದ್ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ, ಜಾತ್ರೆಗಳಲ್ಲಿ ಹೆಚ್ಚಿನ ಮಂದಿ ಸೇರುವುದನ್ನು ನಿರ್ಬಂಧಿಸಲು ವಿಧಿಸಿದೆ.
ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಆರ್ಭಟ: ಇಲ್ಲಿದೆ ಮಾ.26ರ ಅಂಕಿ-ಸಂಖ್ಯೆ
ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಹೆಚ್ಚಿನ ಜನ ಸೇರುತ್ತಿರುವುದರಿಂದ ಕೊರೋನಾ ಮತ್ತಷ್ಟು ಹೆಚ್ಚಾಗುವ ಭೀತಿ ಇದೆ. ಹೀಗಾಗಿ ನಿರ್ಬಂಧ ಅಗತ್ಯ ಎಂದು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ ಹೇಳಿದ್ದಾರೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಕುರಿತು ಕಠಿಣ ನಿಲು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕಾರ್ಯಕ್ರಮಗಳಿಗೆ ಜನ ಸೇರುವಿಕೆ ಮಿತಿ, ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಸೇರಿದಂತೆ ಕೊರೋನಾ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಗೃಹ ಇಲಾಖೆ ಹೇಳಿದೆ. ಹೆಚ್ಚಿನ ಜನಸಂದಣಿ ಪ್ರದೇಶಗಳು ಕೊರೋನಾ ಹಾಟ್ಸ್ಪಾಟ್ ಆಗದಂತೆ ತಡೆಯಲು ಎಲ್ಲಾ ಸರ್ಕಾರಗಳು ತಡೆಯಬೇಕು ಎಂದು ಕೇಂದ್ರ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ