
ಅಹಮ್ಮದಾಬಾದ್(ಏ.27) ಮನೆಯಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳ. ಪತ್ನಿಗೆ ಹಲ್ಲೆ ಮಾಡಿ ಜೈಲು ಸೇರಿದರೂ ಪತಿಯೂ ವರ್ತನೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಜೈಲಿನಿಂದ ಹೊರಬಂದ ಬಳಿಕ ಪತಿಯ ಕ್ರೌರ್ಯ ಹೆಚ್ಚಾಗಿದೆ. ಮನನೊಂದ ಪತ್ನಿ ಬದುಕು ಅಂತ್ಯಗೊಳಿಸಲು ನಿರ್ಧರಿಸಿದ್ದಾಳೆ. ಮನೆಯಲ್ಲಿ ಮಗಳು ಬಿಟ್ಟರೆ ಇನ್ಯಾರು ಇರಲಿಲ್ಲ. ಇದೇ ವೇಳೆ ಕೈಗಳ ನರಗಳನ್ನು ಕತ್ತರಿಸಿದ ಮಹಿಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾಳೆ. ಸದ್ದು ಕೇಳಿ ಓಡಿ ಬಂದ 7 ವರ್ಷದ ಪುತ್ರಿ ತಕ್ಷಣವೇ ತುರ್ತು ಸೇವೆಗೆ ಕರೆ ಮಾಡಿ ತಾಯಿಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ.
ಅಹಮ್ಮದಾಬಾದ್ ನಿವಾಸಿಯಾಗಿರುವ ಈ ಮಹಿಳೆ ಪ್ರತಿ ದಿನ ಪತಿಯಿಂದ ಕಿರಿಕಿರಿ, ದೌರ್ಜನ್ಯ ಅನುಭವಿಸಿದ್ದಾಳೆ. ಎಲ್ಲವನ್ನೂ ಸಹಿಸಿಕೊಂಡು ದಿನದೂಡಿದ್ದ ಮಹಿಳೆ ಮೇಲೆ ಪತಿಯ ಕ್ರೌರ್ಯ ಹೆಚ್ಚಾಗಿದೆ. ಹೀಗಾಗಿ ಪತಿ ಮನೆಯಲ್ಲಿ ಇಲ್ಲದ ವೇಳೆ ಬದುಕಿಗೆ ವಿರಾಮ ನೀಡಲು ಬಯಸಿದ್ದಾಳೆ. ಶಾಲೆಗೆ ರಜೆ ಕಾರಣ 7 ವರ್ಷದ ಮಗಳು ಮಾತ್ರ ಮನೆಯಲ್ಲಿದ್ದಳು. ಮಗಳು ಮತ್ತೊಂದು ಕೋಣೆಯಲ್ಲಿ ಆಡವಾಡುತ್ತಿರುವಾಗ, ಮಹಿಳೆ ಎರಡೂ ಕೈಗಳ ನರಗಳನ್ನು ಕತ್ತರಿಸಿದ್ದಾಳೆ.
ಅಪಾಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಜೀವ ಉಳಿಸಿದ ಐಫೋನ್ ಕ್ರಾಶ್ ಡೆಟೆಕ್ಷನ್ ಫೀಚರ್!
ರಕ್ತ ಸ್ರಾವವಾಗುತ್ತಿದ್ದಂತೆ ಅಸ್ವಸ್ಥಗೊಂಡ ಮಹಿಳೆ ಕುಸಿದು ಬಿದ್ದಿದ್ದಾಳೆ. ಸದ್ದುಕೇಳಿ ಕೋಣೆಯಿಂದ ಹೊರಬಂದ ಮಗಳು ದೃಶ್ಯ ಕಂಡು ಗಾಬರಿಯಾಗಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದ ತಾಯಿಯನ್ನು ಹಿಡಿದು ಕಿರುಚಿದ್ದಾಳೆ. ಇದೇ ವೇಳೆ ತಾಯಿಯ ಬದುಕಿಸಲು ಮುಂದಾಗಿದ್ದಾಳೆ. ಶಾಲೆಯಲ್ಲಿ ಹೇಳಿಕೊಟ್ಟ ಮೌಲ್ಯಯುತ ಪಾಠಗಳು ನೆನಪಿಗೆ ಬಂದಿದೆ. ಅಪಘಾತವಾದಾಗ, ಬೆಂಕಿ ಬಿದ್ದಾಗ, ತುರ್ತು ಸೇವೆಯ ಅಗತ್ಯವಿದ್ದಾಗ ಕರೆ ಮಾಡಿ ಸೇವೆ ಪಡೆದುಕೊಳ್ಳಲು ತಿಳಿಸಲಾಗಿತ್ತು.
ತಕ್ಷಣವೇ ತಾಯಿಯ ಫೋನ್ ತೆಗೆದು 108 ಗೆ ಕರೆ ಮಾಡಿದ್ದಾಳೆ. ಅ್ಯಂಬುಲೆನ್ಸ್ ಸೇವೆಗೆ ಕರೆ ಮಾಡಿ ತನ್ನ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಬದುಕಿಸಿಕೊಡುವಂತೆ ಕೇಳಿದ್ದಾಳೆ. ವಿಳಾಸ ತಿಳಿದುಕೊಂಡು ತುರ್ತು ಸೇವೆ ಅಧಿಕಾರಿಗಳು ತಕ್ಷಣವೇ ಆ್ಯಂಬುಲೆನ್ಸ್ ಮೂಲಕ ಆಗಮಿಸಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ ಪ್ರಾಣಾಪಾಯದಿಂದ ಪಾರಗಿರುವ ಮಹಿಳೆಗೆ ಚಿಕಿತ್ಸೆ ಮುಂದುವರಿದಿದೆ.
ಈ ಘಟನೆ ಕುರಿತು ತುರ್ತು ಸೇವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಗುವಿಗೆ ಶಾಲೆಯಲ್ಲಿ ಹೇಳಿಕೊಟ್ಟ ತುರ್ತು ಸೇವೆ ಬಳಕೆಯನ್ನು ಸರಿಯಾದ ಸಮಯದಲ್ಲಿ ಬಳಸಿದ್ದಾಳೆ. ಆಕೆಯ ಧೈರ್ಯ, ಪರಿಸ್ಥಿತಿಯನ್ನು ಎದುರಿಸಿದ ರೀತಿ ನಿಜಕ್ಕೂ ಅಭಿನಂದನೆಗೆ ಅರ್ಹ. ಆಕೆಯ ತಾಯಿ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ತುರ್ತು ಸೇವೆ ಅಧಿಕಾರಿಗಳು ಹಾರೈಸಿದ್ದಾರೆ.
ಮೈ ಜುಮ್ಮೆನಿಸುವ ವಿಡಿಯೋ, ಹಳಿ ಮೇಲೆ ಮಲಗಿದ ವ್ಯಕ್ತಿಯ ಮಿಂಚಿನ ವೇಗದಲ್ಲಿ ರಕ್ಷಿಸಿದ ಮಹಿಳಾ ಪೊಲೀಸ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ