
ತಿರುವನಂತಪುರ: ಕೇರಳದ ಐಎಎಸ್ ಅಧಿಕಾರಿ ಕೆ.ಗೋಪಾಲಕೃಷ್ಣನ್ ಅವರ ಮೊಬೈಲ್ ವಾಟಾಪ್ ನಂಬರ್ ಬಳಸಿಕೊಂಡು, ಹಿಂದೂ ಐಎಎಸ್ ಮತ್ತು ಮುಸ್ಲಿಂ ಐಎಎಸ್ ಅಧಿಕಾರಿಗಳ ಪ್ರತ್ಯೇಕ ವಾಟ್ಸಾಪ್ ಗ್ರೂಪ್ ರಚಿಸಿರುವ ವಿಷಯ ಬೆಳಕಿಗೆ ಬಂದಿದೆ. 'ಮಲ್ಲು ಹಿಂದೂ ಆಫೀಸರ್ಸ್' ಮತ್ತು 'ಮಲ್ಲು ಮುಸ್ಲಿಂ ಆಫೀಸರ್ಸ್' ಎಂಬುವೇ ಆ ವಾಟ್ಸಾಪ್ ಗ್ರೂಪ್ಗಳು. ಆದರೆ ಈ ಕುರಿತು ನನಗೇ ಮಾಹಿತಿ ಇಲ್ಲ. ಇಂಥ ಗ್ರೂಪ್ ರಚನೆ ಹಿಂದೆ ನನ್ನ ಕೈವಾಡವೂ ಇಲ್ಲ. ಮೊಬೈಲ್ ನಂಬರನ್ನು ಯಾರೋ ಹ್ಯಾಕ್
ಮಾಡಿರುವ ಶಂಕೆ ಇದೆ ಎಂದು ಸ್ಪಷ್ಟಪಡಿಸಿರುವ ಗೋಪಾಲಕೃಷ್ಣನ್, ಈ ಕುರಿತು ತನಿಖೆ ಕೋರಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ಈ ಕೃತ್ಯದ ಹಿಂದಿನ ಶಕ್ತಿಗಳ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ನಡುವೆ ಐಎಎಸ್ ಅಧಿಕಾರಿ ವಲಯದಲ್ಲಿ ಸಾಕಷ್ಟು ಸಕ್ರಿಯ ವಾಟ್ಸಾಪ್ ಗ್ರೂಪ್ಗಳು ಇವೆಯಾದರೂ, ಧರ್ಮದ ಆಧಾರದಲ್ಲಿ ಗ್ರೂಪ್ ರಚನೆ ಇದೇ ಮೊದಲು. ಇದು ಆತಂಕಕಾರಿ ಬೆಳವಣಿಗೆ. ಈ ಕುರಿತು ಸರ್ಕಾರ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಕೇರಳ ಸಚಿವ ಪಿ.ರಾಜೀವ್ ಹೇಳಿದ್ದಾರೆ.
ಏನಿದು ಪ್ರಕರಣ?
3 ದಿನಗಳ ಹಿಂದೆ ಗೋಪಾಲಕೃಷ್ಣನ್ ಅವರ ವಾಟ್ಸಾಪ್ ಮೊಬೈಲ್ ನಂಬರ್ ಬಳಸಿಕೊಂಡು, 'ಮಲ್ಲು ಹಿಂದೂ ಆಫೀಸರ್ಸ್' ಮತ್ತು 'ಮಲ್ಲು ಮುಸ್ಲಿಂ ಆಫೀಸರ್ಸ್' ಹೆಸರಲ್ಲಿ ವಾಟ್ಸಾಪ್ ಗ್ರೂಪ್ ಸೃಷ್ಟಿಯಾಗಿದೆ. ಎರಡೂ ಗುಂಪುಗಳಿಗೂ ಗೋಪಾಲಕೃಷ್ಣನ್ ಅವರೇ ಅಡ್ಮಿನ್ ಎಂದು ತೋರಿಸಲಾಗಿದೆ. ಈ ಬಗ್ಗೆ ಅನ್ಯರು ದೂರಿದಾಗ ವಿಷಯ ಅವರ ಗಮನಕ್ಕೆ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ