ಅಳಗಿರಿ ಆಪ್ತ, ಮಾಜಿ ಸಂಸದ ರಾಮಲಿಂಗಂ ಬಿಜೆಪಿಗೆ!

Published : Nov 22, 2020, 10:06 AM ISTUpdated : Nov 22, 2020, 10:22 AM IST
ಅಳಗಿರಿ ಆಪ್ತ, ಮಾಜಿ ಸಂಸದ ರಾಮಲಿಂಗಂ ಬಿಜೆಪಿಗೆ!

ಸಾರಾಂಶ

ಅಳಗಿರಿ ಆಪ್ತ, ಮಾಜಿ ಸಂಸದ ರಾಮಲಿಂಗಂ ಬಿಜೆಪಿಗೆ| ಅಳಗಿರಿಯನ್ನೂ ಕೇಸರಿ ಪಕ್ಷಕ್ಕೆ ಕರೆತರುವ ಯತ್ನದ ಭರವಸೆ

 

ಚೆನ್ನೈ(ನ.22): ಡಿಎಂಕೆಯಿಂದ ಉಚ್ಛಾಟಿತರಾಗಿರುವ ಕರುಣಾನಿಧಿ ಅವರ ಪುತ್ರ ಅಳಗಿರಿ ಅವರು ಶೀಘ್ರವೇ ಹೊಸ ಪಕ್ಷ ಸ್ಥಾಪಿಸಿ, ಎನ್‌ಡಿಎ ಜೊತೆ ಕೈಜೋಡಿಸಲಿದ್ದಾರೆ ಎಂದು ವರದಿಗಳ ಬೆನ್ನಲ್ಲೇ, ಅಳಗಿರಿ ಅವರ ಬೆಂಬಲಿಗ, ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಶನಿವಾರ ಬಿಜೆಪಿ ಸೇರಿದ್ದಾರೆ.

ಇತ್ತೀಚೆಗಷ್ಟೇ ಡಿಎಂಕೆಯಿಂದ ಅಮಾನತುಗೊಂಡಿದ್ದ ರಾಮಲಿಂಗಂ ಅವರು ದಕ್ಷಿಣ ಭಾರತದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ರಾಮಲಿಂಗಂ, ನಾನು ಬಿಜೆಪಿ ಸೇರುವ ಕುರಿತು ಅಳಗಿರಿ ಅವರಿಗೆ ಮಾಹಿತಿ ನೀಡಿದ್ದೇನೆ. ಜೊತೆಗೆ ಅಳಗಿರಿ ಅವರನ್ನೂ ಬಿಜೆಪಿಗೆ ತರುವ ಯತ್ನ ಮಾಡುವೆ. ಆದರೆ ಅಂತಿಮ ನಿರ್ಧಾರ ಅವರಿಗೇ ಬಿಟ್ಟದ್ದು ಎಂದು ಹೇಳಿದ್ದಾರೆ.

ಇನ್ನು ಈ ಬೆಳವಣಿಗೆ ಬಗ್ಗೆ ಶನಿವಾರ ಟ್ವೀಟ್‌ ಮಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚೆನ್ನೈ ಭೇಟಿಗೆ ಬಂದಿರುವ ದಿನವೇ ಡಿಎಂಕೆ ಮಾಜಿ ಸಂಸದ ಡಾ. ಕೆ.ಪಿ ರಾಮಲಿಂಗಂ ಅವರು ಬಿಜೆಪಿಗೆ ಸೇರ್ಪಡೆಯು ಮಹತ್ವದ ಬೆಳವಣಿಗೆಯಾಗಿದೆ. ಈ ಬೆಳವಣಿಗೆಗಳು ಡಿಎಂಕೆಯನ್ನು ಅವನತಿಗೆ ತಳ್ಳುವುದಷ್ಟೇ ಅಲ್ಲದೆ ತಮಿಳುನಾಡಿನಲ್ಲಿ ಕಮಲ ಅರಳಲು ಶಕ್ತಿ ಹೆಚ್ಚಿಸಲಿದೆ’ ಎಂದು ವಿಶ್ಲೇಷಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು