CAB ಪ್ರತಿಭಟನೆಗೆ ಕಾಂಗ್ರೆಸ್ ಕಾರಣ: ಮೋದಿ ಆರೋಪ!

Suvarna News   | Asianet News
Published : Dec 15, 2019, 05:49 PM IST
CAB ಪ್ರತಿಭಟನೆಗೆ ಕಾಂಗ್ರೆಸ್ ಕಾರಣ: ಮೋದಿ ಆರೋಪ!

ಸಾರಾಂಶ

CAB ಪ್ರತಿಭಟನೆಗೆ ಕಾಂಗ್ರೆಸ್ ಕಾರಣ ಎಂದ ಪ್ರಧಾನಿ ಮೋದಿ| ಜಾರ್ಖಂಡ್’ನ ಡಮ್ಕಾದಲ್ಲಿ ಚುನಾವಣಾ ಪ್ರಚಾರ ಸಭೆ| ‘ಪ್ರತಿಭಟನೆಗಳನ್ನು ಯಾರು ಮಾಡಿಸುತ್ತಿದ್ದಾರೆ ಎಂಬುದು ದೇಶದ ಜನರಿಗೆ ಗೊತ್ತು’| ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಮುಂದುವರೆದ ಪ್ರತಿಭಟನೆ|

ಡಮ್ಕಾ(ಡಿ.15): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

CAB ವಿರೋಧಿ ಹಿಂಸಾತ್ಮಕ ಪ್ರತಿಭಟನೆಗಳನ್ನು ನೋಡಿದರೆ, ಇದನ್ನು ಯಾರು ಮಾಡಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಮೋದಿ ಹೇಳಿದರು.

CAB: ಈಶಾನ್ಯಕ್ಕೆ ರಾ‘ಜೀವ’ ತುಂಬಿದ ಚಂದ್ರಶೇಖರ್!

ಜಾರ್ಖಂಡ್’ನ ಡಮ್ಕಾದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಷಡ್ಯಂತ್ರಗಳ ಹೊರತಾಗಿಯೂ ಶಾಂತಿ ಕಾಪಾಡುವಲ್ಲಿ ಅಸ್ಸಾಂ ಜನತೆ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಪೌರತ್ವ ತಿದ್ದುಪಡಿ ಮಸೂದೆ: ಅಸ್ಸಾಂ ಏಕೆ ಕೊತ ಕೊತ ಕುದಿಯುತ್ತಿದೆ?

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದಾಗ ಪಾಕಿಸ್ತಾನ ವಿದೇಶಗಳಲ್ಲಿರುವ ಭಾರತದ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿತು. ಇದೇ ಕೆಲಸವನ್ನು ಕಾಂಗ್ರೆಸ್ ಈಶಾನ್ಯ ರಾಜ್ಯಗಳಲ್ಲಿ ಮಾಡುತ್ತಿದೆ ಎಂದು ಮೋದಿ ಹರಿಹಾಯ್ದರು.

ಈ ಮಧ್ಯೆ CAB ವಿರುದ್ಧ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಅಸ್ಸಾಂ, ಮೇಘಾಲಯ ಸೇರಿದಂತೆ ಇತರೆಡೆಯೂ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ.

ಇತ್ತ ದೆಹಲಿಯಲ್ಲೂ CAB ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಹಲವು ಬಸ್’ಗಳಿಗೆ ಪ್ರತಿಭಟನಾಕಾರರಿಗೆ ಬೆಂಕಿ ಹಚ್ಚಿದ್ದಾರೆ.

ಮೋದಿ ಸರ್ಕಾರ ದೇಶವನ್ನು ಒಡೆಯುತ್ತಿದೆ: ಸೋನಿಯಾ ವಾಗ್ದಾಳಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ